Advertisement
ಸುದ್ದಿಗಳು

ಎಂಬಿಎ ಪದವೀಧರ ಬಾಂಬ್ ಇಡುವ ಕೆಲಸ ಮಾಡಿದ್ದೇಕೆ…?

Share

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಶಂಕಿತ ಆರೋಪಿ ಎಂಬಿಎ ಪದವೀಧರ ಮಣಿಪಾಲ ಮೂಲದ 34 ವರ್ಷದ  ಆದಿತ್ಯ ರಾವ್ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ. ಎಂಬಿಎ ಪದವೀಧರನಾಗಿ ಆತ ಈ ಕೆಲಸ ಮಾಡಿದ್ದೇಕೆ ?.

ಇಂಜಿನಿಯರಿಂಗ್ ಪದವಿಯ ಬಳಿಕ ಎಂಬಿಎ ಓದಿರುವ ಆದಿತ್ಯ ರಾವ್ ಕೆಲಸವಿಲ್ಲದೆ ಓಡಾಟ ನಡೆಸುತ್ತಿದ್ದ. ಈ ಹಿಂದೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ ಹುದ್ದೆಯ ಕೆಲಸಕ್ಕೆ ಅರ್ಜಿ ಸಲ್ಲಿಸಿದ್ದ. ಆದರೆ ತಾಂತ್ರಿಕ ಕಾರಣಗಳಿಂದ ಆತನ ಅರ್ಜಿ ತಿರಸ್ಕೃತಗೊಂಡಿತ್ತು. ಬಳಿಕ ಮಾನಸಿಕವಾಗಿ ನೊಂದಿದ್ದ ಇದರಿಂದ 2018ರಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣವನ್ನು ಸ್ಫೋಟಿಸುವುದಾಗಿ ಹುಸಿ ಬೆದರಿಕೆ ಕರೆ ಮಾಡಿದ್ದ. ಒಟ್ಟು ಮೂರು ಹುಸಿ ಬೆದರಿಕೆ ಕರೆಗಳನ್ನು ಮಾಡಿದ್ದ ಆತನನ್ನು 2018ರ ಆಗಸ್ಟ್‌ 29ರಂದು ಬಂಧಿಸಲಾಗಿತ್ತು. ನಂತರ ಆತನ ಬಿಡುಗಡೆಯಾಗಿದ್ದ. ಅದಾದ ಬಳಿಕ ಮಣಿಪಾಲದಲ್ಲಿ  ಕೆಲ ಸಮಯ ಇದ್ದು ನಂತರ ಮಂಗಳೂರಿನಲ್ಲಿ  ಹೋಟೆಲ್ ಒಂದರಲ್ಲಿ  ಕೆಲಸ ಮಾಡುತ್ತಿದ್ದ. ಹೋಟೆಲ್ ನಲ್ಲಿ ಸಪ್ಲೈ ಕೆಲಸಕ್ಕೆ ಬಂದವನಿಗೆ ಓದಿನ ಅರ್ಹತೆ ನೋಡಿ ಬಿಲ್ ಮಾಡುವ ಕೆಲಸ ನೀಡಿದ್ದರು. ಹೆಚ್ಚು ಮಾತನಾಡದ ಆದಿತ್ಯ ರಾವ್ ತನ್ನ ಪಾಡಿಗೆ ಇದ್ದ ಎಂದು ತಿಳಿದುಬಂದಿದೆ. ಇದೀಗ ಬಾಂಬ್ ಇರಿಸಿ ಪೊಲೀಸ್ ಅತಿಥಿಯಾಗಿದ್ದಾನೆ.

ಬಾಂಬ್ ತಯಾರು ಮಾಡಿದ್ದು ಹಾಗೂ ಈ ಬಗ್ಗೆ ಪೊಲೀಸ್ ಉನ್ನತ ಮೂಲಗಳ ಪ್ರಕಾರ ಈತ ಯೂಟೂಬ್ ನೋಡಿ ಬಾಂಬ್ ತಯಾರಿಕೆಯಲ್ಲಿ ತೊಡಗಿದ್ದು, ಆನ್ ಲೈನ್ ಮೂಲಕವೇ ಅದಕ್ಕೆ ಬೇಕಾದ ವಸ್ತುಗಳನ್ನು ತರಿಸಿದ್ದ ಇದಕ್ಕಾಗಿ ಹಲವು ಬಾರಿ ಪ್ರಯತ್ನ ಮಾಡಿದ್ದ ಎಂದು ತಿಳಿದು ಬಂದಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ  ಬಾಂಬ್ ಇರಿಸಿದ ಬಳಿಕ ಮಾರುವೇಷದಲ್ಲಿ  ಬೆಂಗಳೂರಿಗೆ ತೆರಳಿದ್ದ ಬಳಿಕ ಭಯಗೊಂಡು ಮಂಗಳವಾರ ರಾತ್ರಿ ಪೊಲೀಸರಿಗೆ ಶರಣಾಗಿದ್ದ.  ಮನೆಯವರೊಂದಿಗೆ ಹೆಚ್ಚು ಸಂಪರ್ಕವಿಲ್ಲದೆ ಆದಿತ್ಯ ತನ್ನ ಪಾಡಿಗೆ ಇದ್ದ. ಉದ್ಯೋಗದ ಹುಡುಕಾಟ ಎಂದು ಮನೆಯಲ್ಲಿ  ಹೇಳುತ್ತಿದ್ದ ಎಂದು ಪೊಲೀಸ್ ಮೂಲಗಳು ಹೇಳುತ್ತವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

9 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

10 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

10 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

16 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

18 hours ago

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…

18 hours ago