Advertisement
ಸುದ್ದಿಗಳು

ಎಂಬಿಎ ಪದವೀಧರ ಬಾಂಬ್ ಇಡುವ ಕೆಲಸ ಮಾಡಿದ್ದೇಕೆ…?

Share

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಶಂಕಿತ ಆರೋಪಿ ಎಂಬಿಎ ಪದವೀಧರ ಮಣಿಪಾಲ ಮೂಲದ 34 ವರ್ಷದ  ಆದಿತ್ಯ ರಾವ್ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ. ಎಂಬಿಎ ಪದವೀಧರನಾಗಿ ಆತ ಈ ಕೆಲಸ ಮಾಡಿದ್ದೇಕೆ ?.

ಇಂಜಿನಿಯರಿಂಗ್ ಪದವಿಯ ಬಳಿಕ ಎಂಬಿಎ ಓದಿರುವ ಆದಿತ್ಯ ರಾವ್ ಕೆಲಸವಿಲ್ಲದೆ ಓಡಾಟ ನಡೆಸುತ್ತಿದ್ದ. ಈ ಹಿಂದೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ ಹುದ್ದೆಯ ಕೆಲಸಕ್ಕೆ ಅರ್ಜಿ ಸಲ್ಲಿಸಿದ್ದ. ಆದರೆ ತಾಂತ್ರಿಕ ಕಾರಣಗಳಿಂದ ಆತನ ಅರ್ಜಿ ತಿರಸ್ಕೃತಗೊಂಡಿತ್ತು. ಬಳಿಕ ಮಾನಸಿಕವಾಗಿ ನೊಂದಿದ್ದ ಇದರಿಂದ 2018ರಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣವನ್ನು ಸ್ಫೋಟಿಸುವುದಾಗಿ ಹುಸಿ ಬೆದರಿಕೆ ಕರೆ ಮಾಡಿದ್ದ. ಒಟ್ಟು ಮೂರು ಹುಸಿ ಬೆದರಿಕೆ ಕರೆಗಳನ್ನು ಮಾಡಿದ್ದ ಆತನನ್ನು 2018ರ ಆಗಸ್ಟ್‌ 29ರಂದು ಬಂಧಿಸಲಾಗಿತ್ತು. ನಂತರ ಆತನ ಬಿಡುಗಡೆಯಾಗಿದ್ದ. ಅದಾದ ಬಳಿಕ ಮಣಿಪಾಲದಲ್ಲಿ  ಕೆಲ ಸಮಯ ಇದ್ದು ನಂತರ ಮಂಗಳೂರಿನಲ್ಲಿ  ಹೋಟೆಲ್ ಒಂದರಲ್ಲಿ  ಕೆಲಸ ಮಾಡುತ್ತಿದ್ದ. ಹೋಟೆಲ್ ನಲ್ಲಿ ಸಪ್ಲೈ ಕೆಲಸಕ್ಕೆ ಬಂದವನಿಗೆ ಓದಿನ ಅರ್ಹತೆ ನೋಡಿ ಬಿಲ್ ಮಾಡುವ ಕೆಲಸ ನೀಡಿದ್ದರು. ಹೆಚ್ಚು ಮಾತನಾಡದ ಆದಿತ್ಯ ರಾವ್ ತನ್ನ ಪಾಡಿಗೆ ಇದ್ದ ಎಂದು ತಿಳಿದುಬಂದಿದೆ. ಇದೀಗ ಬಾಂಬ್ ಇರಿಸಿ ಪೊಲೀಸ್ ಅತಿಥಿಯಾಗಿದ್ದಾನೆ.

ಬಾಂಬ್ ತಯಾರು ಮಾಡಿದ್ದು ಹಾಗೂ ಈ ಬಗ್ಗೆ ಪೊಲೀಸ್ ಉನ್ನತ ಮೂಲಗಳ ಪ್ರಕಾರ ಈತ ಯೂಟೂಬ್ ನೋಡಿ ಬಾಂಬ್ ತಯಾರಿಕೆಯಲ್ಲಿ ತೊಡಗಿದ್ದು, ಆನ್ ಲೈನ್ ಮೂಲಕವೇ ಅದಕ್ಕೆ ಬೇಕಾದ ವಸ್ತುಗಳನ್ನು ತರಿಸಿದ್ದ ಇದಕ್ಕಾಗಿ ಹಲವು ಬಾರಿ ಪ್ರಯತ್ನ ಮಾಡಿದ್ದ ಎಂದು ತಿಳಿದು ಬಂದಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ  ಬಾಂಬ್ ಇರಿಸಿದ ಬಳಿಕ ಮಾರುವೇಷದಲ್ಲಿ  ಬೆಂಗಳೂರಿಗೆ ತೆರಳಿದ್ದ ಬಳಿಕ ಭಯಗೊಂಡು ಮಂಗಳವಾರ ರಾತ್ರಿ ಪೊಲೀಸರಿಗೆ ಶರಣಾಗಿದ್ದ.  ಮನೆಯವರೊಂದಿಗೆ ಹೆಚ್ಚು ಸಂಪರ್ಕವಿಲ್ಲದೆ ಆದಿತ್ಯ ತನ್ನ ಪಾಡಿಗೆ ಇದ್ದ. ಉದ್ಯೋಗದ ಹುಡುಕಾಟ ಎಂದು ಮನೆಯಲ್ಲಿ  ಹೇಳುತ್ತಿದ್ದ ಎಂದು ಪೊಲೀಸ್ ಮೂಲಗಳು ಹೇಳುತ್ತವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

1 hour ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

8 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

8 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

8 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

8 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

8 hours ago