Advertisement
ಸುದ್ದಿಗಳು

ಎಂಬಿಎ ಪದವೀಧರ ಬಾಂಬ್ ಇಡುವ ಕೆಲಸ ಮಾಡಿದ್ದೇಕೆ…?

Share

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಶಂಕಿತ ಆರೋಪಿ ಎಂಬಿಎ ಪದವೀಧರ ಮಣಿಪಾಲ ಮೂಲದ 34 ವರ್ಷದ  ಆದಿತ್ಯ ರಾವ್ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ. ಎಂಬಿಎ ಪದವೀಧರನಾಗಿ ಆತ ಈ ಕೆಲಸ ಮಾಡಿದ್ದೇಕೆ ?.

Advertisement
Advertisement

ಇಂಜಿನಿಯರಿಂಗ್ ಪದವಿಯ ಬಳಿಕ ಎಂಬಿಎ ಓದಿರುವ ಆದಿತ್ಯ ರಾವ್ ಕೆಲಸವಿಲ್ಲದೆ ಓಡಾಟ ನಡೆಸುತ್ತಿದ್ದ. ಈ ಹಿಂದೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ ಹುದ್ದೆಯ ಕೆಲಸಕ್ಕೆ ಅರ್ಜಿ ಸಲ್ಲಿಸಿದ್ದ. ಆದರೆ ತಾಂತ್ರಿಕ ಕಾರಣಗಳಿಂದ ಆತನ ಅರ್ಜಿ ತಿರಸ್ಕೃತಗೊಂಡಿತ್ತು. ಬಳಿಕ ಮಾನಸಿಕವಾಗಿ ನೊಂದಿದ್ದ ಇದರಿಂದ 2018ರಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣವನ್ನು ಸ್ಫೋಟಿಸುವುದಾಗಿ ಹುಸಿ ಬೆದರಿಕೆ ಕರೆ ಮಾಡಿದ್ದ. ಒಟ್ಟು ಮೂರು ಹುಸಿ ಬೆದರಿಕೆ ಕರೆಗಳನ್ನು ಮಾಡಿದ್ದ ಆತನನ್ನು 2018ರ ಆಗಸ್ಟ್‌ 29ರಂದು ಬಂಧಿಸಲಾಗಿತ್ತು. ನಂತರ ಆತನ ಬಿಡುಗಡೆಯಾಗಿದ್ದ. ಅದಾದ ಬಳಿಕ ಮಣಿಪಾಲದಲ್ಲಿ  ಕೆಲ ಸಮಯ ಇದ್ದು ನಂತರ ಮಂಗಳೂರಿನಲ್ಲಿ  ಹೋಟೆಲ್ ಒಂದರಲ್ಲಿ  ಕೆಲಸ ಮಾಡುತ್ತಿದ್ದ. ಹೋಟೆಲ್ ನಲ್ಲಿ ಸಪ್ಲೈ ಕೆಲಸಕ್ಕೆ ಬಂದವನಿಗೆ ಓದಿನ ಅರ್ಹತೆ ನೋಡಿ ಬಿಲ್ ಮಾಡುವ ಕೆಲಸ ನೀಡಿದ್ದರು. ಹೆಚ್ಚು ಮಾತನಾಡದ ಆದಿತ್ಯ ರಾವ್ ತನ್ನ ಪಾಡಿಗೆ ಇದ್ದ ಎಂದು ತಿಳಿದುಬಂದಿದೆ. ಇದೀಗ ಬಾಂಬ್ ಇರಿಸಿ ಪೊಲೀಸ್ ಅತಿಥಿಯಾಗಿದ್ದಾನೆ.

Advertisement

ಬಾಂಬ್ ತಯಾರು ಮಾಡಿದ್ದು ಹಾಗೂ ಈ ಬಗ್ಗೆ ಪೊಲೀಸ್ ಉನ್ನತ ಮೂಲಗಳ ಪ್ರಕಾರ ಈತ ಯೂಟೂಬ್ ನೋಡಿ ಬಾಂಬ್ ತಯಾರಿಕೆಯಲ್ಲಿ ತೊಡಗಿದ್ದು, ಆನ್ ಲೈನ್ ಮೂಲಕವೇ ಅದಕ್ಕೆ ಬೇಕಾದ ವಸ್ತುಗಳನ್ನು ತರಿಸಿದ್ದ ಇದಕ್ಕಾಗಿ ಹಲವು ಬಾರಿ ಪ್ರಯತ್ನ ಮಾಡಿದ್ದ ಎಂದು ತಿಳಿದು ಬಂದಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ  ಬಾಂಬ್ ಇರಿಸಿದ ಬಳಿಕ ಮಾರುವೇಷದಲ್ಲಿ  ಬೆಂಗಳೂರಿಗೆ ತೆರಳಿದ್ದ ಬಳಿಕ ಭಯಗೊಂಡು ಮಂಗಳವಾರ ರಾತ್ರಿ ಪೊಲೀಸರಿಗೆ ಶರಣಾಗಿದ್ದ.  ಮನೆಯವರೊಂದಿಗೆ ಹೆಚ್ಚು ಸಂಪರ್ಕವಿಲ್ಲದೆ ಆದಿತ್ಯ ತನ್ನ ಪಾಡಿಗೆ ಇದ್ದ. ಉದ್ಯೋಗದ ಹುಡುಕಾಟ ಎಂದು ಮನೆಯಲ್ಲಿ  ಹೇಳುತ್ತಿದ್ದ ಎಂದು ಪೊಲೀಸ್ ಮೂಲಗಳು ಹೇಳುತ್ತವೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …

6 hours ago

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |

ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.

14 hours ago

Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…

17 hours ago

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

2 days ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

2 days ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

2 days ago