Advertisement
ಸುದ್ದಿಗಳು

ಎಂಬಿಎ ಪದವೀಧರ ಬಾಂಬ್ ಇಡುವ ಕೆಲಸ ಮಾಡಿದ್ದೇಕೆ…?

Share

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಶಂಕಿತ ಆರೋಪಿ ಎಂಬಿಎ ಪದವೀಧರ ಮಣಿಪಾಲ ಮೂಲದ 34 ವರ್ಷದ  ಆದಿತ್ಯ ರಾವ್ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ. ಎಂಬಿಎ ಪದವೀಧರನಾಗಿ ಆತ ಈ ಕೆಲಸ ಮಾಡಿದ್ದೇಕೆ ?.

ಇಂಜಿನಿಯರಿಂಗ್ ಪದವಿಯ ಬಳಿಕ ಎಂಬಿಎ ಓದಿರುವ ಆದಿತ್ಯ ರಾವ್ ಕೆಲಸವಿಲ್ಲದೆ ಓಡಾಟ ನಡೆಸುತ್ತಿದ್ದ. ಈ ಹಿಂದೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ ಹುದ್ದೆಯ ಕೆಲಸಕ್ಕೆ ಅರ್ಜಿ ಸಲ್ಲಿಸಿದ್ದ. ಆದರೆ ತಾಂತ್ರಿಕ ಕಾರಣಗಳಿಂದ ಆತನ ಅರ್ಜಿ ತಿರಸ್ಕೃತಗೊಂಡಿತ್ತು. ಬಳಿಕ ಮಾನಸಿಕವಾಗಿ ನೊಂದಿದ್ದ ಇದರಿಂದ 2018ರಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣವನ್ನು ಸ್ಫೋಟಿಸುವುದಾಗಿ ಹುಸಿ ಬೆದರಿಕೆ ಕರೆ ಮಾಡಿದ್ದ. ಒಟ್ಟು ಮೂರು ಹುಸಿ ಬೆದರಿಕೆ ಕರೆಗಳನ್ನು ಮಾಡಿದ್ದ ಆತನನ್ನು 2018ರ ಆಗಸ್ಟ್‌ 29ರಂದು ಬಂಧಿಸಲಾಗಿತ್ತು. ನಂತರ ಆತನ ಬಿಡುಗಡೆಯಾಗಿದ್ದ. ಅದಾದ ಬಳಿಕ ಮಣಿಪಾಲದಲ್ಲಿ  ಕೆಲ ಸಮಯ ಇದ್ದು ನಂತರ ಮಂಗಳೂರಿನಲ್ಲಿ  ಹೋಟೆಲ್ ಒಂದರಲ್ಲಿ  ಕೆಲಸ ಮಾಡುತ್ತಿದ್ದ. ಹೋಟೆಲ್ ನಲ್ಲಿ ಸಪ್ಲೈ ಕೆಲಸಕ್ಕೆ ಬಂದವನಿಗೆ ಓದಿನ ಅರ್ಹತೆ ನೋಡಿ ಬಿಲ್ ಮಾಡುವ ಕೆಲಸ ನೀಡಿದ್ದರು. ಹೆಚ್ಚು ಮಾತನಾಡದ ಆದಿತ್ಯ ರಾವ್ ತನ್ನ ಪಾಡಿಗೆ ಇದ್ದ ಎಂದು ತಿಳಿದುಬಂದಿದೆ. ಇದೀಗ ಬಾಂಬ್ ಇರಿಸಿ ಪೊಲೀಸ್ ಅತಿಥಿಯಾಗಿದ್ದಾನೆ.

ಬಾಂಬ್ ತಯಾರು ಮಾಡಿದ್ದು ಹಾಗೂ ಈ ಬಗ್ಗೆ ಪೊಲೀಸ್ ಉನ್ನತ ಮೂಲಗಳ ಪ್ರಕಾರ ಈತ ಯೂಟೂಬ್ ನೋಡಿ ಬಾಂಬ್ ತಯಾರಿಕೆಯಲ್ಲಿ ತೊಡಗಿದ್ದು, ಆನ್ ಲೈನ್ ಮೂಲಕವೇ ಅದಕ್ಕೆ ಬೇಕಾದ ವಸ್ತುಗಳನ್ನು ತರಿಸಿದ್ದ ಇದಕ್ಕಾಗಿ ಹಲವು ಬಾರಿ ಪ್ರಯತ್ನ ಮಾಡಿದ್ದ ಎಂದು ತಿಳಿದು ಬಂದಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ  ಬಾಂಬ್ ಇರಿಸಿದ ಬಳಿಕ ಮಾರುವೇಷದಲ್ಲಿ  ಬೆಂಗಳೂರಿಗೆ ತೆರಳಿದ್ದ ಬಳಿಕ ಭಯಗೊಂಡು ಮಂಗಳವಾರ ರಾತ್ರಿ ಪೊಲೀಸರಿಗೆ ಶರಣಾಗಿದ್ದ.  ಮನೆಯವರೊಂದಿಗೆ ಹೆಚ್ಚು ಸಂಪರ್ಕವಿಲ್ಲದೆ ಆದಿತ್ಯ ತನ್ನ ಪಾಡಿಗೆ ಇದ್ದ. ಉದ್ಯೋಗದ ಹುಡುಕಾಟ ಎಂದು ಮನೆಯಲ್ಲಿ  ಹೇಳುತ್ತಿದ್ದ ಎಂದು ಪೊಲೀಸ್ ಮೂಲಗಳು ಹೇಳುತ್ತವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

3 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

3 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

3 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

8 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago