Advertisement
ಸುದ್ದಿಗಳು

ಎಂಸಿಜೆ ವಿಭಾಗದಿಂದ ಜನಮನ ಕಾರ್ಯಕ್ರಮ: ಸೇನೆಯ ಸೇವೆ ಶ್ರೇಷ್ಠವಾದದ್ದು : ರಮೇಶ್ ಬಾಬು

Share

ಪುತ್ತೂರು : ನಾವೆಲ್ಲರೂ ಭಾರತದಲ್ಲಿ ಹುಟ್ಟಿದ್ದಕ್ಕೆ ಹೆಮ್ಮೆ ಪಡಬೇಕು. ಅದೇ ರೀತಿ ನಮ್ಮ ಸೈನ್ಯದ ಸೇವೆಯನ್ನು ಸ್ಮರಿಸಬೇಕು. ಏಕೆಂದರೆ ಅವರ ರಕ್ಷಣೆಯನ್ನು ಮಾಡಿಕೊಂಡು ದೇಶ ರಕ್ಷಣೆಯನ್ನು ಮಾಡುತ್ತಾರೆ. ಇನ್ನು ಕೆಲವು ಸಂದರ್ಭ ದೇಶದ ಒಳಗಿನ ದಂಗೆ ಮತ್ತು ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಸೇನೆಯು ನೀಡುವ ಸೇವೆ ಸರ್ವಶ್ರೇಷ್ಠವಾಗಿದೆ ಎಂದು ನಿವೃತ್ತ ಸೇನಾಧಿಕಾರಿ ರಮೇಶ್ ಬಾಬು ಹೇಳಿದರು.

Advertisement
Advertisement
Advertisement
Advertisement

ಅವರು ಇಲ್ಲಿನ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ಕೇಂದ್ರದಲ್ಲಿ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವತಿಯಿಂದ ನಡೆದ ‘ಜನ ಮನ’ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಂಗಳವಾರ ಮಾತನಾಡಿದರು.
ಸೈನಿಕರು ಕಾಶ್ಮೀರದಂತಹ ಪ್ರದೇಶದಲ್ಲಿ ತಮಗೆ ಯಾವುದೇ ಸಂಬಂಧವಿಲ್ಲದಿದ್ದರೂ ದೇಶ ಕಾಪಾಡಲು ಇಪ್ಪತ್ತನಾಲ್ಕು ಗಂಟೆ ಸೇವೆಯನ್ನು ಮಾಡುತ್ತಾರೆ. ಇಲ್ಲಿ ಧರ್ಮ, ಜಾತಿ, ಪಂಗಡಗಳು ಎಂಬ ಭೇದಭಾವವಿಲ್ಲ. ರಾಷ್ಟ್ರ ಧ್ವಜದ ಮುಂದೆ ಎಲ್ಲಾ ಧರ್ಮಗಳು ಸಮಾನ. ಸೈನಿಕರು ತಮ್ಮ ವೈಯಕ್ತಿಕ ವಿಷಯವನ್ನು ಬದಿಗಿಟ್ಟು ದೇಶಕ್ಕೋಸ್ಕರ ಸೇನೆಯಲ್ಲಿ ದುಡಿಯುತ್ತಾರೆ, ಇದು ನಿಜವಾದ ದೇಶಪ್ರೇಮ ಎಂದು ಹೇಳಿದರು.

Advertisement

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಐಕ್ಯುಎಸಿ ಘಟಕದ ಸಂಯೋಜಕ ಡಾ. ಎಚ್.ಜಿ. ಶ್ರೀಧರ ಮಾತನಾಡಿ, ಸೈನ್ಯದ ಜಗತ್ತು ಬೇರೆ ಏಕೆಂದರೆ ಅಲ್ಲಿ ಎದುರಾಳಿಗಳನ್ನು ಎದುರಿಸಿ ದೇಶಕ್ಕೆ ರಕ್ಷಣೆಯನ್ನು ನೀಡುವ ಕೆಲಸವನ್ನು ಸೇವೆಯ ರೂಪದಲ್ಲಿ ಮಾಡುತ್ತಾರೆ. ಹಾಗಾಗಿ ಇಲ್ಲಿ ಸೇವೆಯನ್ನು ಸಲ್ಲಿಸುವುದು ಹೆಮ್ಮೆಯ ವಿಷಯ ಎಂದು ಹೇಳಿದರು.
ಈ ಸಂದರ್ಭ ಉಪನ್ಯಾಸಕಿ ಸುಷ್ಮಿತಾ ಜೆ., ರಾಧಿಕಾ ಕಾನತ್ತಡ್ಕ, ಉಪನ್ಯಾಸಕ ಭರತ್‍ರಾಜ್ ಕರ್ತಡ್ಕ ಉಪಸ್ಥಿತರಿದ್ದರು. ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಂಯೋಜಕ ರಾಕೇಶ್ ಕುಮಾರ್ ಕಮ್ಮಜೆ ಸ್ವಾಗತಿಸಿ ಪ್ರಾಸ್ತಾವಿಸಿದರು. ಉಪನ್ಯಾಸಕಿ ಪ್ರಜ್ಞಾ ಬಾರ್ಯ ವಂದಿಸಿ, ವಿದ್ಯಾರ್ಥಿನಿ ಸುಷ್ಮಾ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago