ಪುತ್ತೂರು : ನಾವೆಲ್ಲರೂ ಭಾರತದಲ್ಲಿ ಹುಟ್ಟಿದ್ದಕ್ಕೆ ಹೆಮ್ಮೆ ಪಡಬೇಕು. ಅದೇ ರೀತಿ ನಮ್ಮ ಸೈನ್ಯದ ಸೇವೆಯನ್ನು ಸ್ಮರಿಸಬೇಕು. ಏಕೆಂದರೆ ಅವರ ರಕ್ಷಣೆಯನ್ನು ಮಾಡಿಕೊಂಡು ದೇಶ ರಕ್ಷಣೆಯನ್ನು ಮಾಡುತ್ತಾರೆ. ಇನ್ನು ಕೆಲವು ಸಂದರ್ಭ ದೇಶದ ಒಳಗಿನ ದಂಗೆ ಮತ್ತು ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಸೇನೆಯು ನೀಡುವ ಸೇವೆ ಸರ್ವಶ್ರೇಷ್ಠವಾಗಿದೆ ಎಂದು ನಿವೃತ್ತ ಸೇನಾಧಿಕಾರಿ ರಮೇಶ್ ಬಾಬು ಹೇಳಿದರು.
ಅವರು ಇಲ್ಲಿನ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ಕೇಂದ್ರದಲ್ಲಿ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವತಿಯಿಂದ ನಡೆದ ‘ಜನ ಮನ’ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಂಗಳವಾರ ಮಾತನಾಡಿದರು.
ಸೈನಿಕರು ಕಾಶ್ಮೀರದಂತಹ ಪ್ರದೇಶದಲ್ಲಿ ತಮಗೆ ಯಾವುದೇ ಸಂಬಂಧವಿಲ್ಲದಿದ್ದರೂ ದೇಶ ಕಾಪಾಡಲು ಇಪ್ಪತ್ತನಾಲ್ಕು ಗಂಟೆ ಸೇವೆಯನ್ನು ಮಾಡುತ್ತಾರೆ. ಇಲ್ಲಿ ಧರ್ಮ, ಜಾತಿ, ಪಂಗಡಗಳು ಎಂಬ ಭೇದಭಾವವಿಲ್ಲ. ರಾಷ್ಟ್ರ ಧ್ವಜದ ಮುಂದೆ ಎಲ್ಲಾ ಧರ್ಮಗಳು ಸಮಾನ. ಸೈನಿಕರು ತಮ್ಮ ವೈಯಕ್ತಿಕ ವಿಷಯವನ್ನು ಬದಿಗಿಟ್ಟು ದೇಶಕ್ಕೋಸ್ಕರ ಸೇನೆಯಲ್ಲಿ ದುಡಿಯುತ್ತಾರೆ, ಇದು ನಿಜವಾದ ದೇಶಪ್ರೇಮ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಐಕ್ಯುಎಸಿ ಘಟಕದ ಸಂಯೋಜಕ ಡಾ. ಎಚ್.ಜಿ. ಶ್ರೀಧರ ಮಾತನಾಡಿ, ಸೈನ್ಯದ ಜಗತ್ತು ಬೇರೆ ಏಕೆಂದರೆ ಅಲ್ಲಿ ಎದುರಾಳಿಗಳನ್ನು ಎದುರಿಸಿ ದೇಶಕ್ಕೆ ರಕ್ಷಣೆಯನ್ನು ನೀಡುವ ಕೆಲಸವನ್ನು ಸೇವೆಯ ರೂಪದಲ್ಲಿ ಮಾಡುತ್ತಾರೆ. ಹಾಗಾಗಿ ಇಲ್ಲಿ ಸೇವೆಯನ್ನು ಸಲ್ಲಿಸುವುದು ಹೆಮ್ಮೆಯ ವಿಷಯ ಎಂದು ಹೇಳಿದರು.
ಈ ಸಂದರ್ಭ ಉಪನ್ಯಾಸಕಿ ಸುಷ್ಮಿತಾ ಜೆ., ರಾಧಿಕಾ ಕಾನತ್ತಡ್ಕ, ಉಪನ್ಯಾಸಕ ಭರತ್ರಾಜ್ ಕರ್ತಡ್ಕ ಉಪಸ್ಥಿತರಿದ್ದರು. ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಂಯೋಜಕ ರಾಕೇಶ್ ಕುಮಾರ್ ಕಮ್ಮಜೆ ಸ್ವಾಗತಿಸಿ ಪ್ರಾಸ್ತಾವಿಸಿದರು. ಉಪನ್ಯಾಸಕಿ ಪ್ರಜ್ಞಾ ಬಾರ್ಯ ವಂದಿಸಿ, ವಿದ್ಯಾರ್ಥಿನಿ ಸುಷ್ಮಾ ಕಾರ್ಯಕ್ರಮ ನಿರೂಪಿಸಿದರು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…