ಪುತ್ತೂರು: ಜೀವನ ಪಾಠಕ್ಕಿಂತ ಮಿಗಿಲಾದ ಪಾಠ ಬೇರೊಂದಿಲ್ಲ. ಓರ್ವನ ಅನುಭವ ಇನ್ನೊಬ್ಬನಿಗೆ ಕೈದೀವಿಗೆಯಾಗುತ್ತದೆ. ಶ್ರಮದ ಮೂಲಕ ಬದುಕನ್ನು ಕಟ್ಟುವುದು ಹೇಳಿದಷ್ಟು ಸುಲಭವಲ್ಲ. ಈ ರೀತಿ ಬೆಳೆದ ರಘುನಾಥ ರಾಯರು ವೃತ್ತಿ ಬದ್ಧತೆಯಿಂದ ಮುದ್ರಣ ಕ್ಷೇತ್ರಕ್ಕೆ ಗೌರವ ತಂದಿದ್ದಾರೆ. ರಾಜೇಶ್ ಪವರ್ ಪ್ರೆಸ್ ಪುತ್ತೂರಿನ ಹೆಮ್ಮೆಯ ಸಂಸ್ಥೆಯಾಗಿ ಬೆಳೆದಿದೆ ಎಂದು ಸವಣೂರಿನ ವಿದ್ಯಾರಶ್ಮೀ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ ಹೇಳಿದರು.
ದರ್ಭೆಯ ರಾಜೇಶ್ ಪವರ್ ಪ್ರೆಸ್ಸಿನಲ್ಲಿ ಜರುಗಿದ ಸರಳ ಸಮಾರಂಭದಲ್ಲಿ ಎಂ.ಎಸ್.ರಘುನಾಥ ರಾಯರ ವೃತ್ತಿ ಬದುಕಿನ ಅನುಭವ ಗಾಥೆ ‘ಅಕ್ಷರಯಾನ’ ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡುತ್ತಾ, “ಹಿರಿಯರು ಬದುಕಿ ತೋರಿಸಿದ ಜೀವನದ ದರ್ಶನಗಳು ಯುವಕರಿಗೆ ಸ್ಫೂರ್ತಿಯ ದೀವಿಗೆಯಾಗುತ್ತದೆ. ಅಕ್ಷರಯಾನವು ಕಾಲದ ದಾಖಲಾತಿಯಾಗುವುದರಲ್ಲಿ ಸಂಶಯವಿಲ್ಲ.” ಎಂದರು.
ಅಕ್ಷರಯಾನದ ಸಂಪಾದಕ ಹಾಗೂ ಪತ್ರಕರ್ತ, ಲೇಖಕ ನಾ. ಕಾರಂತ ಪೆರಾಜೆಯವರು ಕೃತಿಯನ್ನು ಪರಿಚಯಿಸುತ್ತಾ, “ಮುದ್ರಣ ಕ್ಷೇತ್ರದಲ್ಲಿ ಇಂತಹ ಅನುಭವ ಕಥನ ಅಪರೂಪ” ಎಂದರು.
ಹಿರಿಯ ಸಾಹಿತಿ ಗೋಪಾಲಕೃಷ್ಣ ಶಗ್ರಿತ್ತಾಯರು ರಘುನಾಥ ರಾಯರ ಒಟ್ಟೂ ಬದುಕನ್ನು ಹಾಡಿನ ಮೂಲಕ ಪ್ರಸ್ತುತಪಡಿಸಿ ಅಭಿನಂದಿಸಿದರು. ಕಲಾವಿದ ಪ್ರಸನ್ನ ರೈ ಸವಣೂರು, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯಗುರು ಆಶಾ ಬೆಳ್ಳಾರೆ, ವಿವೇಕಾನಂದ ಶಿಶುಮಂದಿರದ ಆಡಳಿತ ಮಂಡಳಿಯ ಅಧ್ಯಕ್ಷ ಅಶೋಕ ಕುಂಬಳೆ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ರಘುನಾಥ ರಾಯರು ಸ್ವಾಗತಿಸಿದರು. ನಾರಾಯಣ ನಿರ್ವಹಿಸಿ, ವಂದಿಸಿದರು. ಶ್ಯಾಮಲಾ ರಘುನಾಥ ರಾವ್, ರಾಜೇಶ್, ಸ್ವಪ್ನಾ, ಕು.ಅನಘಾ, ಕು.ಅನನ್ಯಾ.. ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದರು. ಪ್ರೆಸ್ಸಿನ ಲೆಕ್ಕಪತ್ರಗಳ ಉಸ್ತುವಾರಿಯಾಗಿರುವ ಲೋನಾ ಪಿಂಟೋ ಸಹಿತ ಸಿಬ್ಬಂದಿಗಳು ಈ ಸಮಾರಂಭಕ್ಕೆ ಸಾಕ್ಷಿಯಾದರು.
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…