ಪುತ್ತೂರು: ಜೀವನ ಪಾಠಕ್ಕಿಂತ ಮಿಗಿಲಾದ ಪಾಠ ಬೇರೊಂದಿಲ್ಲ. ಓರ್ವನ ಅನುಭವ ಇನ್ನೊಬ್ಬನಿಗೆ ಕೈದೀವಿಗೆಯಾಗುತ್ತದೆ. ಶ್ರಮದ ಮೂಲಕ ಬದುಕನ್ನು ಕಟ್ಟುವುದು ಹೇಳಿದಷ್ಟು ಸುಲಭವಲ್ಲ. ಈ ರೀತಿ ಬೆಳೆದ ರಘುನಾಥ ರಾಯರು ವೃತ್ತಿ ಬದ್ಧತೆಯಿಂದ ಮುದ್ರಣ ಕ್ಷೇತ್ರಕ್ಕೆ ಗೌರವ ತಂದಿದ್ದಾರೆ. ರಾಜೇಶ್ ಪವರ್ ಪ್ರೆಸ್ ಪುತ್ತೂರಿನ ಹೆಮ್ಮೆಯ ಸಂಸ್ಥೆಯಾಗಿ ಬೆಳೆದಿದೆ ಎಂದು ಸವಣೂರಿನ ವಿದ್ಯಾರಶ್ಮೀ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ ಹೇಳಿದರು.
ದರ್ಭೆಯ ರಾಜೇಶ್ ಪವರ್ ಪ್ರೆಸ್ಸಿನಲ್ಲಿ ಜರುಗಿದ ಸರಳ ಸಮಾರಂಭದಲ್ಲಿ ಎಂ.ಎಸ್.ರಘುನಾಥ ರಾಯರ ವೃತ್ತಿ ಬದುಕಿನ ಅನುಭವ ಗಾಥೆ ‘ಅಕ್ಷರಯಾನ’ ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡುತ್ತಾ, “ಹಿರಿಯರು ಬದುಕಿ ತೋರಿಸಿದ ಜೀವನದ ದರ್ಶನಗಳು ಯುವಕರಿಗೆ ಸ್ಫೂರ್ತಿಯ ದೀವಿಗೆಯಾಗುತ್ತದೆ. ಅಕ್ಷರಯಾನವು ಕಾಲದ ದಾಖಲಾತಿಯಾಗುವುದರಲ್ಲಿ ಸಂಶಯವಿಲ್ಲ.” ಎಂದರು.
ಅಕ್ಷರಯಾನದ ಸಂಪಾದಕ ಹಾಗೂ ಪತ್ರಕರ್ತ, ಲೇಖಕ ನಾ. ಕಾರಂತ ಪೆರಾಜೆಯವರು ಕೃತಿಯನ್ನು ಪರಿಚಯಿಸುತ್ತಾ, “ಮುದ್ರಣ ಕ್ಷೇತ್ರದಲ್ಲಿ ಇಂತಹ ಅನುಭವ ಕಥನ ಅಪರೂಪ” ಎಂದರು.
ಹಿರಿಯ ಸಾಹಿತಿ ಗೋಪಾಲಕೃಷ್ಣ ಶಗ್ರಿತ್ತಾಯರು ರಘುನಾಥ ರಾಯರ ಒಟ್ಟೂ ಬದುಕನ್ನು ಹಾಡಿನ ಮೂಲಕ ಪ್ರಸ್ತುತಪಡಿಸಿ ಅಭಿನಂದಿಸಿದರು. ಕಲಾವಿದ ಪ್ರಸನ್ನ ರೈ ಸವಣೂರು, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯಗುರು ಆಶಾ ಬೆಳ್ಳಾರೆ, ವಿವೇಕಾನಂದ ಶಿಶುಮಂದಿರದ ಆಡಳಿತ ಮಂಡಳಿಯ ಅಧ್ಯಕ್ಷ ಅಶೋಕ ಕುಂಬಳೆ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ರಘುನಾಥ ರಾಯರು ಸ್ವಾಗತಿಸಿದರು. ನಾರಾಯಣ ನಿರ್ವಹಿಸಿ, ವಂದಿಸಿದರು. ಶ್ಯಾಮಲಾ ರಘುನಾಥ ರಾವ್, ರಾಜೇಶ್, ಸ್ವಪ್ನಾ, ಕು.ಅನಘಾ, ಕು.ಅನನ್ಯಾ.. ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದರು. ಪ್ರೆಸ್ಸಿನ ಲೆಕ್ಕಪತ್ರಗಳ ಉಸ್ತುವಾರಿಯಾಗಿರುವ ಲೋನಾ ಪಿಂಟೋ ಸಹಿತ ಸಿಬ್ಬಂದಿಗಳು ಈ ಸಮಾರಂಭಕ್ಕೆ ಸಾಕ್ಷಿಯಾದರು.
ಗೋಕರ್ಣದಲ್ಲಿ ನಡೆಯಲಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಮೂಲಕ ಆಹಾರದ ಮಹತ್ವ ಹಾಗೂ ಅನ್ನ ವ್ಯರ್ಥ…
ಮಾರುಕಟ್ಟೆಯಲ್ಲಿ ತಿರಸ್ಕೃತವಾಗುವ ಗ್ರೇಡ್-ಬಿ ಮಾವು ಮತ್ತು ತೆಂಗುಗಳನ್ನು ಮೌಲ್ಯವರ್ಧಿತ ಉತ್ಪನ್ನಗಳಾಗಿ ಪರಿವರ್ತಿಸಿ ರೈತರಿಗೆ…
2050ರ ವೇಳೆಗೆ ಜಗತ್ತಿನಲ್ಲಿ ಕ್ಯಾನ್ಸರ್ ಚಿಕಿತ್ಸಾ ಕ್ಷೇತ್ರದಲ್ಲಿ 10 ಕೋಟಿ ಸಿಬ್ಬಂದಿ ಕೊರತೆ…
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ರಾಜ್ಯದ ಅಡಿಕೆ ವ್ಯಾಪಾರಿಗಳಿಗೆ ಹೊಸ ಸಂಕಷ್ಟ ತಂದೊಡ್ಡಿದೆ.…
ದೇಶದಲ್ಲಿ ಮುಂಗಾರು ಚಟುವಟಿಕೆ ದುರ್ಬಲವಾಗಿದ್ದು, ಜೂನ್ 18ರವರೆಗೆ ಮಳೆ ಕೊರತೆ ಶೇ.40ಕ್ಕೆ ಏರಿಕೆಯಾಗಿದೆ.…
ಇ-ವೇ ಬಿಲ್ ಮತ್ತು ಸಾರಿಗೆ ದಾಖಲೆಗಳ ಕೊರತೆಯಿಂದ ₹2.22 ಕೋಟಿ ಮೌಲ್ಯದ 33.6…