ಸುಳ್ಯ: ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಹಿರಿಯ ಮುಖಂಡ ಎಂ.ಬಿ.ಸದಾಶಿವ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕು ಎಂದು ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯುವಜನ ಸಂಯುಕ್ತ ಮಂಡಳಿ ಮಾಜಿ ಅಧ್ಯಕ್ಷ ದಿನೇಶ್ ಮಡಪ್ಪಾಡಿ ಯುವಜನರ ಪರವಾಗಿ ಧ್ವನಿ ಎತ್ತಲು, ಯುವಜನರ ಏಳಿಗೆಗೆ ಮತ್ತು ಯುವಜನ ಸಂಯುಕ್ತ ಮಂಡಳಿ, ಯುವಕ ಮಂಡಲಗಳಿಗೆ ಸೂಕ್ತ ಸಹಾಯ ದೊರಕಿಸುವ ಸಲುವಾಗಿ ಯುವಜನರ ಪ್ರತಿನಿಧಿಯಾಗಿ ಎಂ.ಬಿ.ಸದಾಶಿವ ಅವರಿಗೆ ಎಂಎಲ್ಸಿ ಸ್ಥಾನ ನೀಡಬೇಕೆಂದು ಸರಕಾರವನ್ನು ಒತ್ತಾಯಿಸಲಾಗುವುದು. ಇದಕ್ಕಾಗಿ ನಿಯೋಗ ತೆರಳಿ ಜೆಡಿಎಸ್ ವರಿಷ್ಠರನ್ನು ಮತ್ತು ಮುಖ್ಯಮಂತ್ರಿಯನ್ನು ಒತ್ತಾಯಿಸಲಾಗುವುದು ಎಂದು ಅವರು ಹೇಳಿದರು.
ರಾಜಕೀಯ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿರುವ, ವಿಷಯಗಳನ್ನು ಆಳವಾಗಿ ಅಧ್ಯಯನ ನಡೆಸುವ, ಪ್ರಖರ ವಾಗ್ಮಿ, ನಿರೂಪಕ, ಲೇಖಕ, ಸಂಘಟಕ ಎಂಬ ನೆಲೆಯಲ್ಲಿಯೂ ಹೆಸರು ಮಾಡಿರುವ ಎಂಬಿ ಸದಾಶಿವ ಅವರನ್ನು ಎಂಎಲ್ಸಿ ಮಾಡಿದಲ್ಲಿ ಕರಾವಳಿಗೆ ಜಿಲ್ಲೆಗೆ ಹೆಚ್ಚಿನ ಪ್ರಯೋಜನ ಆಗಲಿದೆ ಎಂದು ಅವರು ಹೇಳಿದರು.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…