Advertisement
ಸುದ್ದಿಗಳು

ಎಂ.ಬಿ‌.ಸದಾಶಿವ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕೆಂದು ಒತ್ತಾಯ

Share

ಸುಳ್ಯ: ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಹಿರಿಯ ಮುಖಂಡ ಎಂ.ಬಿ‌.ಸದಾಶಿವ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕು ಎಂದು ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯುವಜನ ಸಂಯುಕ್ತ ಮಂಡಳಿ ಮಾಜಿ ಅಧ್ಯಕ್ಷ ದಿನೇಶ್ ಮಡಪ್ಪಾಡಿ ಯುವಜನರ ಪರವಾಗಿ ಧ್ವನಿ ಎತ್ತಲು, ಯುವಜನರ ಏಳಿಗೆಗೆ ಮತ್ತು ಯುವಜನ ಸಂಯುಕ್ತ ಮಂಡಳಿ, ಯುವಕ ಮಂಡಲಗಳಿಗೆ ಸೂಕ್ತ ಸಹಾಯ ದೊರಕಿಸುವ ಸಲುವಾಗಿ ಯುವಜನರ ಪ್ರತಿನಿಧಿಯಾಗಿ ಎಂ.ಬಿ.ಸದಾಶಿವ ಅವರಿಗೆ ಎಂಎಲ್ಸಿ ಸ್ಥಾನ ನೀಡಬೇಕೆಂದು ಸರಕಾರವನ್ನು ಒತ್ತಾಯಿಸಲಾಗುವುದು. ಇದಕ್ಕಾಗಿ ನಿಯೋಗ ತೆರಳಿ ಜೆಡಿಎಸ್ ವರಿಷ್ಠರನ್ನು ಮತ್ತು ಮುಖ್ಯಮಂತ್ರಿಯನ್ನು ಒತ್ತಾಯಿಸಲಾಗುವುದು ಎಂದು ಅವರು ಹೇಳಿದರು.

ರಾಜಕೀಯ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿರುವ, ವಿಷಯಗಳನ್ನು ಆಳವಾಗಿ ಅಧ್ಯಯನ ನಡೆಸುವ, ಪ್ರಖರ ವಾಗ್ಮಿ, ನಿರೂಪಕ, ಲೇಖಕ, ಸಂಘಟಕ ಎಂಬ ನೆಲೆಯಲ್ಲಿಯೂ ಹೆಸರು ಮಾಡಿರುವ ಎಂಬಿ ಸದಾಶಿವ ಅವರನ್ನು ಎಂಎಲ್ಸಿ ಮಾಡಿದಲ್ಲಿ ಕರಾವಳಿಗೆ ಜಿಲ್ಲೆಗೆ ಹೆಚ್ಚಿನ ಪ್ರಯೋಜನ ಆಗಲಿದೆ ಎಂದು ಅವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

31 minutes ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

3 hours ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

13 hours ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

13 hours ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

1 day ago