ಸುಳ್ಯ: ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಹಿರಿಯ ಮುಖಂಡ ಎಂ.ಬಿ.ಸದಾಶಿವ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕು ಎಂದು ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯುವಜನ ಸಂಯುಕ್ತ ಮಂಡಳಿ ಮಾಜಿ ಅಧ್ಯಕ್ಷ ದಿನೇಶ್ ಮಡಪ್ಪಾಡಿ ಯುವಜನರ ಪರವಾಗಿ ಧ್ವನಿ ಎತ್ತಲು, ಯುವಜನರ ಏಳಿಗೆಗೆ ಮತ್ತು ಯುವಜನ ಸಂಯುಕ್ತ ಮಂಡಳಿ, ಯುವಕ ಮಂಡಲಗಳಿಗೆ ಸೂಕ್ತ ಸಹಾಯ ದೊರಕಿಸುವ ಸಲುವಾಗಿ ಯುವಜನರ ಪ್ರತಿನಿಧಿಯಾಗಿ ಎಂ.ಬಿ.ಸದಾಶಿವ ಅವರಿಗೆ ಎಂಎಲ್ಸಿ ಸ್ಥಾನ ನೀಡಬೇಕೆಂದು ಸರಕಾರವನ್ನು ಒತ್ತಾಯಿಸಲಾಗುವುದು. ಇದಕ್ಕಾಗಿ ನಿಯೋಗ ತೆರಳಿ ಜೆಡಿಎಸ್ ವರಿಷ್ಠರನ್ನು ಮತ್ತು ಮುಖ್ಯಮಂತ್ರಿಯನ್ನು ಒತ್ತಾಯಿಸಲಾಗುವುದು ಎಂದು ಅವರು ಹೇಳಿದರು.
ರಾಜಕೀಯ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿರುವ, ವಿಷಯಗಳನ್ನು ಆಳವಾಗಿ ಅಧ್ಯಯನ ನಡೆಸುವ, ಪ್ರಖರ ವಾಗ್ಮಿ, ನಿರೂಪಕ, ಲೇಖಕ, ಸಂಘಟಕ ಎಂಬ ನೆಲೆಯಲ್ಲಿಯೂ ಹೆಸರು ಮಾಡಿರುವ ಎಂಬಿ ಸದಾಶಿವ ಅವರನ್ನು ಎಂಎಲ್ಸಿ ಮಾಡಿದಲ್ಲಿ ಕರಾವಳಿಗೆ ಜಿಲ್ಲೆಗೆ ಹೆಚ್ಚಿನ ಪ್ರಯೋಜನ ಆಗಲಿದೆ ಎಂದು ಅವರು ಹೇಳಿದರು.
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…