ಸುಳ್ಯ: ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಹಿರಿಯ ಮುಖಂಡ ಎಂ.ಬಿ.ಸದಾಶಿವ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕು ಎಂದು ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯುವಜನ ಸಂಯುಕ್ತ ಮಂಡಳಿ ಮಾಜಿ ಅಧ್ಯಕ್ಷ ದಿನೇಶ್ ಮಡಪ್ಪಾಡಿ ಯುವಜನರ ಪರವಾಗಿ ಧ್ವನಿ ಎತ್ತಲು, ಯುವಜನರ ಏಳಿಗೆಗೆ ಮತ್ತು ಯುವಜನ ಸಂಯುಕ್ತ ಮಂಡಳಿ, ಯುವಕ ಮಂಡಲಗಳಿಗೆ ಸೂಕ್ತ ಸಹಾಯ ದೊರಕಿಸುವ ಸಲುವಾಗಿ ಯುವಜನರ ಪ್ರತಿನಿಧಿಯಾಗಿ ಎಂ.ಬಿ.ಸದಾಶಿವ ಅವರಿಗೆ ಎಂಎಲ್ಸಿ ಸ್ಥಾನ ನೀಡಬೇಕೆಂದು ಸರಕಾರವನ್ನು ಒತ್ತಾಯಿಸಲಾಗುವುದು. ಇದಕ್ಕಾಗಿ ನಿಯೋಗ ತೆರಳಿ ಜೆಡಿಎಸ್ ವರಿಷ್ಠರನ್ನು ಮತ್ತು ಮುಖ್ಯಮಂತ್ರಿಯನ್ನು ಒತ್ತಾಯಿಸಲಾಗುವುದು ಎಂದು ಅವರು ಹೇಳಿದರು.
ರಾಜಕೀಯ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿರುವ, ವಿಷಯಗಳನ್ನು ಆಳವಾಗಿ ಅಧ್ಯಯನ ನಡೆಸುವ, ಪ್ರಖರ ವಾಗ್ಮಿ, ನಿರೂಪಕ, ಲೇಖಕ, ಸಂಘಟಕ ಎಂಬ ನೆಲೆಯಲ್ಲಿಯೂ ಹೆಸರು ಮಾಡಿರುವ ಎಂಬಿ ಸದಾಶಿವ ಅವರನ್ನು ಎಂಎಲ್ಸಿ ಮಾಡಿದಲ್ಲಿ ಕರಾವಳಿಗೆ ಜಿಲ್ಲೆಗೆ ಹೆಚ್ಚಿನ ಪ್ರಯೋಜನ ಆಗಲಿದೆ ಎಂದು ಅವರು ಹೇಳಿದರು.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…