ಸುಳ್ಯ: ಇಂಡಿಯನ್ ಮುಸ್ಲಿಂ ಲೀಗ್ ಅಧೀನದಲ್ಲಿರುವ ಈ ಸಂಸ್ಥೆಯು ಕಳೆದ ವರ್ಷ 50 ಜೋಡಿ ಸಾಮೂಹಿಕ ವಿವಾಹವನ್ನು ನೇರವೆರಿಸಿ ಈ ವರ್ಷ 100 ಜೋಡಿ ವಿವಾಹದಲ್ಲಿ ಹಿಂದು ಮುಸ್ಲಿಂ ಕ್ರೆಸ್ತ ರನ್ನು ಒಳಗೊಂಡು ಭಾರತೀಯ ಕೋಮು ಸೌಹಾರ್ದತೆಗೆ ಮಾದರಿಯಾಗಿದೆ. ಇದು ಇತರರಿಗೆ ಪ್ರೇರಣೆಯಾಗಲಿ. ಈ ಸಂಸ್ಥೆಗೆ ಕನ್ನಡ ರಾಜ್ಯೊತ್ಸವ ಪ್ರಶಸ್ತಿ ದೊರೆಯುವಂತಾಗಲಿ ಎಂದು ರಾಜೀವ್ ಯೂತ್ ರಾಜ್ಯಾಧ್ಯಕ್ಷ ಟಿ.ಎಮ್ .ಶಹೀದ್ ತೆಕ್ಕಿಲ್ ಹೇಳಿದರು.
ಅವರು ಆಲ್ ಇಂಡಿಯಾ ಕೇರಳ ಮುಸ್ಲಿ ಕಲ್ಚರಲ್ ಸೆಂಟ್ರಲ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 100ಜೋಡಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು . ಈ ಸಂದರ್ಭದಲ್ಲಿ ಸಯ್ಯದ್ ಪಾಣಕ್ಕಾಡ್ ಶಿಹಾಬ್ ತಂಙಳ್ , ಸಯ್ಯದ್ ಪಾಣಕ್ಕಾಡ್ ಮುನವ್ವರಾಲಿ ತಂಙಳ್ , ಸಯ್ಯದ್ ಪಾಣಕ್ಕಾಡ್ ಸಾದಿಕ್ ಅಲಿ ತಂಙಳ್, ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡ, ಸಂಸತ್ ಸದಸ್ಯ ಕುಂಞಾಲಿ ಕುಟ್ಟಿ, ಶಾಸಕರಾದ ಯು.ಟಿ.ಖಾದರ್, ಯನ್.ಎ.ಹಾರೀಸ್, ಕೆ.ಎಮ್ .ಸಿ.ಸಿ. ನಾಯಕರಾದ ನೌಶಾದ್, ಸಲೀಂ ಟರ್ಲಿ, ಸಂಸುದ್ದೀನ್ ಅರಂತೋಡು, ತಾಜುದ್ದೀನ್ ಟರ್ಲಿ, ತಾಜುದ್ದೀನ್ ಅರಂತೋಡು ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.
ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…
ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿಯಲ್ಲಿ…
ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ…
ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…
ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…
1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…