ಸುಳ್ಯ: ಇಂಡಿಯನ್ ಮುಸ್ಲಿಂ ಲೀಗ್ ಅಧೀನದಲ್ಲಿರುವ ಈ ಸಂಸ್ಥೆಯು ಕಳೆದ ವರ್ಷ 50 ಜೋಡಿ ಸಾಮೂಹಿಕ ವಿವಾಹವನ್ನು ನೇರವೆರಿಸಿ ಈ ವರ್ಷ 100 ಜೋಡಿ ವಿವಾಹದಲ್ಲಿ ಹಿಂದು ಮುಸ್ಲಿಂ ಕ್ರೆಸ್ತ ರನ್ನು ಒಳಗೊಂಡು ಭಾರತೀಯ ಕೋಮು ಸೌಹಾರ್ದತೆಗೆ ಮಾದರಿಯಾಗಿದೆ. ಇದು ಇತರರಿಗೆ ಪ್ರೇರಣೆಯಾಗಲಿ. ಈ ಸಂಸ್ಥೆಗೆ ಕನ್ನಡ ರಾಜ್ಯೊತ್ಸವ ಪ್ರಶಸ್ತಿ ದೊರೆಯುವಂತಾಗಲಿ ಎಂದು ರಾಜೀವ್ ಯೂತ್ ರಾಜ್ಯಾಧ್ಯಕ್ಷ ಟಿ.ಎಮ್ .ಶಹೀದ್ ತೆಕ್ಕಿಲ್ ಹೇಳಿದರು.
ಅವರು ಆಲ್ ಇಂಡಿಯಾ ಕೇರಳ ಮುಸ್ಲಿ ಕಲ್ಚರಲ್ ಸೆಂಟ್ರಲ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 100ಜೋಡಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು . ಈ ಸಂದರ್ಭದಲ್ಲಿ ಸಯ್ಯದ್ ಪಾಣಕ್ಕಾಡ್ ಶಿಹಾಬ್ ತಂಙಳ್ , ಸಯ್ಯದ್ ಪಾಣಕ್ಕಾಡ್ ಮುನವ್ವರಾಲಿ ತಂಙಳ್ , ಸಯ್ಯದ್ ಪಾಣಕ್ಕಾಡ್ ಸಾದಿಕ್ ಅಲಿ ತಂಙಳ್, ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡ, ಸಂಸತ್ ಸದಸ್ಯ ಕುಂಞಾಲಿ ಕುಟ್ಟಿ, ಶಾಸಕರಾದ ಯು.ಟಿ.ಖಾದರ್, ಯನ್.ಎ.ಹಾರೀಸ್, ಕೆ.ಎಮ್ .ಸಿ.ಸಿ. ನಾಯಕರಾದ ನೌಶಾದ್, ಸಲೀಂ ಟರ್ಲಿ, ಸಂಸುದ್ದೀನ್ ಅರಂತೋಡು, ತಾಜುದ್ದೀನ್ ಟರ್ಲಿ, ತಾಜುದ್ದೀನ್ ಅರಂತೋಡು ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…