Advertisement
ಜಿಲ್ಲೆ

ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿಯೇ ಮುಂದುವರಿಯಲಿ – ಕೊಡಗು ಕಾಂಗ್ರೆಸ್ ಒತ್ತಾಯ

Share

ಮಡಿಕೇರಿ : ಲೋಕಸಭಾ ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಕೈಗೊಂಡಿರುವ ರಾಹುಲ್ ಗಾಂಧಿ ಅವರು ಅದೇ ಹುದ್ದೆಯಲ್ಲಿ ಮುಂದುವರಿಯಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ನಿರ್ಣಯ ಕೈಗೊಂಡು ಎಐಸಿಸಿ ಮತ್ತು ಕೆಪಿಸಿಸಿಗೆ ಕಳುಹಿಸಿಕೊಟ್ಟಿದೆ.

Advertisement

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ರಾಹುಲ್ ಗಾಂಧಿ ಪರ ಒಲವು ವ್ಯಕ್ತಪಡಿಸಲಾಯಿತು.
ಈ ಸಂದರ್ಭ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ಕಾಂಗ್ರೆಸ್ ಪಕ್ಷದೊಳಗಿನ ಕೆಲವು ನ್ಯೂನತೆಗಳನ್ನು ಕಾರ್ಯಕರ್ತರೇ ಸರಿಪಡಿಸಿಕೊಂಡು ಪಕ್ಷವನ್ನು ಮತ್ತೆ ಬಲಿಷ್ಠಗೊಳಿಸಲಿದ್ದಾರೆ. ಆದ್ದರಿಂದ ಈ ಬಾರಿಯ ಲೋಕಸಭಾ ಚುನಾವಣೆಯನ್ನು ಸಮರ್ಥವಾಗಿ ಎದುರಿಸಿದ ರಾಹುಲ್ ಗಾಂಧಿ ಅವರು ತಮ್ಮ ಸ್ಥಾನವನ್ನು ತ್ಯಜಿಸುವ ಅಗತ್ಯವಿಲ್ಲದೆಂದರು. ಕಾಂಗ್ರೆಸ್ ಪಕ್ಷದ ಗೆಲುವಿಗೆ ರಾಹುಲ್ ಗಾಂಧಿ ಅವರ ಅನಿವಾರ್ಯತೆ ಇದೆ, ಕಾರ್ಯಕರ್ತರಿಗೆ ಅವರ ಮಾರ್ಗದರ್ಶನದ ಅಗತ್ಯವಿದೆ. ಕಾಂಗ್ರೆಸ್ ಪಕ್ಷದ ರಾಜ್ಯ ಹಾಗೂ ರಾಷ್ಟ್ರಮಟ್ಟದ ಎಲ್ಲಾ ಘಟಕಗಳು ರಾಹುಲ್ ಗಾಂಧಿಯವರೇ ಅಧ್ಯಕ್ಷರಾಗಿ ಮುಂದುವರಿಯಬೇಕೆಂದು ಬಯಸುತ್ತಿವೆ ಎಂದರು.

ಕೆಪಿಸಿಸಿ ಸದಸ್ಯ ಟಿ.ಪಿ.ರಮೇಶ್ ಅವರು ಮಾತನಾಡಿ ಅಧಿಕಾರ ಹಾಗೂ ಚುನಾವಣಾ ರಾಜಕಾರಣದಲ್ಲಿ ಕಾಂಗ್ರೆಸ್‍ನ ಇತಿಹಾಸವನ್ನು ಗಮನಿಸಿದರೆ ವಿಶ್ವದಲ್ಲೇ ಇದೊಂದು ಯಶಸ್ವೀ ಪಕ್ಷವೆನಿಸಿಕೊಂಡಿದೆ. ಆದರೆ ಪಕ್ಷದೊಳಗಿನ ಕೆಲವು ಲೋಪದೋಷಗಳಿಂದಾಗಿ ಇತ್ತೀಚಿನ ದಿನಗಳಲ್ಲಿ ಗೆಲುವು ಕ್ಷೀಣಿಸುತ್ತಿದೆ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹನೀಫ್ ಸಂಪಾಜೆ, ಪರಿಶಿಷ್ಟ ಘಟಕದ ಜಿಲ್ಲಾಧ್ಯಕ್ಷ ಸತೀಶ್ ಕುಮಾರ್, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲೋಕೇಶ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕÀ ತೆನ್ನಿರ ಮೈನಾ, ಸಾಮಾಜಿಕ ಜಾಲತಾಣದ ಅಧ್ಯಕ್ಷ ಸೂರಜ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ನಗರಾಧ್ಯಕ್ಷೆ ಪಾರ್ವತಿ ಫ್ಯಾನ್ಸಿ ಮತ್ತಿತರ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಉಪಸ್ಥಿತರಿದ್ದರು.
ಸಭೆಯ ನಂತರ ಕಾಂಗ್ರೆಸ್ ಕಚೇರಿಯ ಎದುರು ರಾಹುಲ್ ಗಾಂಧಿ ಪರ ಘೋಷಣೆಗಳನ್ನು ಕೂಗಿದ ಮುಖಂಡರು ಹಾಗೂ ಕಾರ್ಯಕರ್ತರು ಹುದ್ದೆಯಲ್ಲಿ ಮುಂದುರಿಯುವಂತೆ ಒತ್ತಾಯಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

2 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

8 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

12 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

13 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

13 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

1 day ago