ಎಚ್ಚರಿಕೆ…. ನಾಕೂರುಗಯದಲ್ಲಿ ಮೊಸಳೆ ಇದೆ….!

May 7, 2019
12:00 PM

ಪಂಜ: ಎಚ್ಚರಿಕೆ…. ಎಚ್ಚರಿಕೆ… ಕಡಬ ತಾಲೂಕಿನ ನಾಕೂರುಗಯದಲ್ಲಿ  ಮೊಸಳೆ ಇದೆ. ತೀರ್ಥಸ್ನಾನ ಮಾಡುವ ಭಕ್ತರೇ, ನದಿಗೆ ಹಾಲೆರೆಯುವ ಭಕ್ತರೇ ಸ್ವಲ್ಪ ಗಮನಿಸಿಕೊಳ್ಳಿ.

Advertisement
Advertisement
Advertisement

 

Advertisement

ಕಡಬ ತಾಲೂಕಿನ ಪುಳಿಕುಕ್ಕು ಬಳಿಯ ನಾಕೂರುಗಯದಲ್ಲಿ ಮೊಸಳೆ ಕಂಡುಬಂದಿದೆ. ಈ ಮೊಸಳೆ ಗಯದಲ್ಲಿ ಮಾತ್ರವಲ್ಲ ಪುಳಿಕುಕ್ಕು ಪ್ರದೇಶದ ಕುಮಾರಧಾರಾ ನದಿಯಲ್ಲಿ  ಓಡಾಡುತ್ತಿರುತ್ತದೆ ಎಂದು ಈಗ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಕಳೆದ ವರ್ಷ ನದಿ ಸಮೀಪದ ಕೃಷಿಕರ ನಾಯಿಯನ್ನು ಹಿಡಿದಿದೆ ಎಂದೂ ತಿಳಿಸಿದ್ದಾರೆ.

Advertisement

Advertisement

ನಾಕೂರುಗಯಕ್ಕೆ ಅನೇಕ ಭಕ್ತಾದಿಗಳು ಪ್ರತಿದಿನ ಆಗಮಿಸುತ್ತಾರೆ. ತೀರ್ಥಸ್ನಾನ ಮಾಡಲು ಆಗಮಿಸಿದರೆ, ಇನ್ನೂ ಕೆಲವರು ನದಿಗೆ ಹಾಲು ಬಿಡಲು ಆಗಮಿಸುತ್ತಾರೆ. ಈ ನಾಕೂರುಗಯದಲ್ಲಿ ನೀರಿನ ಒಳಗಡೆ ದೇವಸ್ಥಾನ ಇದೆ ಎಂಬ ನಂಬಿಕೆ ಭಕ್ತರಲ್ಲಿದೆ ಇದೆ. ಹೀಗಾಗಿ ಭಕ್ತಿಯಿಂದ ಆಗಮಿಸುವ ಜನರಿಗೆ ಮೊಸಳೆಯ ಸಂಗತಿ ತಿಳಿಯದೆ ನೀರಿಗೆ ಇಳಿಯುವ ಸಂದರ್ಭ ಅಪಾಯ ಆಗುವ ಸಾಧ್ಯತೆ ಇದೆ. ಈ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಮೊಸಳೆ ವ್ಯಕ್ತಿಯನ್ನು ಹಿಡಿದುಕೊಂಡು ಮೊಸಳೆ ನೀರೊಳಗೆ ಮುಳುಗಿದ ದೃಶ್ಯ ಹರಿದಾಡುತ್ತಿತ್ತು. ಈಗ ಇಲ್ಲೂ ಅಂತಹ ಅಪಾಯ ತಪ್ಪಿಸಲು ಕ್ರಮ ಆಗಬೇಕಿದೆ. ಜಾಗೃತಿ ಮೂಡಬೇಕಿದೆ.

Advertisement

ಈ ಕಾರಣದಿಂದ ಅರಣ್ಯ ಇಲಾಖೆ ಹಾಗೂ ಸ್ಥಳೀಯ ಪಂಚಾಯತ್ ಗಮನಿಸಿ ಸೂಚನಾ ಫಲಕ ಅಳವಡಿಕೆ ಮಾಡಬೇಕಿದೆ. ಎಚ್ಚರಿಕಾ ಫಲಕ ಅಳವಡಿಕೆ ಬಗ್ಗೆ ನಾಕೂರು ಗಯ ಹಿತರಕ್ಷಣಾ ವೇದಿಕೆಯೂ ಗಮನಹರಿಸಬೇಕಿದೆ.

 

Advertisement
  • ಚಿತ್ರ ಕೃಪೆ: ಶಿವಸುಬ್ರಹ್ಮಣ್ಯ  ಕಲ್ಮಡ್ಕ , ಪತ್ರಕರ್ತ 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಧುಮೇಹಕ್ಕೆ ಗೋವಿನ ಔಷಧಿ | ದಿವ್ಯ ಔಷಧಿ ತಯಾರಿಸಿದ ಗೋಪ್ರೇಮಿ |
March 24, 2024
9:55 AM
by: ಮಹೇಶ್ ಪುಚ್ಚಪ್ಪಾಡಿ
ಅರ್ಥಿಕ ಬೆಳೆಯಾಗಿ ಬಿದಿರು | ಬಿದಿರು ಬೆಳೆಸುವ ಕುರಿತು ವಿಚಾರ ವಿನಿಮಯ ಸಭೆ
March 18, 2024
2:05 PM
by: The Rural Mirror ಸುದ್ದಿಜಾಲ
ಕರಾವಳಿಯ ವಾಣಿಜ್ಯ ಬೆಳೆ ಅಡಿಕೆ, ಕೊಕೋ, ರಬ್ಬರ್‌, ಕರಿಮೆಣಸು ಮಾತುಕತೆ | ಈಗ ಯಾವುದಕ್ಕೆ ಎಷ್ಟು ಬೆಲೆ ಇದೆ..?
March 16, 2024
11:20 AM
by: The Rural Mirror ಸುದ್ದಿಜಾಲ
ಓರೆಕೋರೆ ಕಳೆದು ನೇರವಾಗ್ತಿವೆ ಮಾರ್ಗಗಳು…| ಊರಿಗೂ-ದಾರಿಗೂ ಸಂಬಂಧಗಳೇ ಇಲ್ಲ!
March 12, 2024
11:24 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror