ಪಂಜ: ಎಚ್ಚರಿಕೆ…. ಎಚ್ಚರಿಕೆ… ಕಡಬ ತಾಲೂಕಿನ ನಾಕೂರುಗಯದಲ್ಲಿ ಮೊಸಳೆ ಇದೆ. ತೀರ್ಥಸ್ನಾನ ಮಾಡುವ ಭಕ್ತರೇ, ನದಿಗೆ ಹಾಲೆರೆಯುವ ಭಕ್ತರೇ ಸ್ವಲ್ಪ ಗಮನಿಸಿಕೊಳ್ಳಿ.
ಕಡಬ ತಾಲೂಕಿನ ಪುಳಿಕುಕ್ಕು ಬಳಿಯ ನಾಕೂರುಗಯದಲ್ಲಿ ಮೊಸಳೆ ಕಂಡುಬಂದಿದೆ. ಈ ಮೊಸಳೆ ಗಯದಲ್ಲಿ ಮಾತ್ರವಲ್ಲ ಪುಳಿಕುಕ್ಕು ಪ್ರದೇಶದ ಕುಮಾರಧಾರಾ ನದಿಯಲ್ಲಿ ಓಡಾಡುತ್ತಿರುತ್ತದೆ ಎಂದು ಈಗ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಕಳೆದ ವರ್ಷ ನದಿ ಸಮೀಪದ ಕೃಷಿಕರ ನಾಯಿಯನ್ನು ಹಿಡಿದಿದೆ ಎಂದೂ ತಿಳಿಸಿದ್ದಾರೆ.
ನಾಕೂರುಗಯಕ್ಕೆ ಅನೇಕ ಭಕ್ತಾದಿಗಳು ಪ್ರತಿದಿನ ಆಗಮಿಸುತ್ತಾರೆ. ತೀರ್ಥಸ್ನಾನ ಮಾಡಲು ಆಗಮಿಸಿದರೆ, ಇನ್ನೂ ಕೆಲವರು ನದಿಗೆ ಹಾಲು ಬಿಡಲು ಆಗಮಿಸುತ್ತಾರೆ. ಈ ನಾಕೂರುಗಯದಲ್ಲಿ ನೀರಿನ ಒಳಗಡೆ ದೇವಸ್ಥಾನ ಇದೆ ಎಂಬ ನಂಬಿಕೆ ಭಕ್ತರಲ್ಲಿದೆ ಇದೆ. ಹೀಗಾಗಿ ಭಕ್ತಿಯಿಂದ ಆಗಮಿಸುವ ಜನರಿಗೆ ಮೊಸಳೆಯ ಸಂಗತಿ ತಿಳಿಯದೆ ನೀರಿಗೆ ಇಳಿಯುವ ಸಂದರ್ಭ ಅಪಾಯ ಆಗುವ ಸಾಧ್ಯತೆ ಇದೆ. ಈ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಮೊಸಳೆ ವ್ಯಕ್ತಿಯನ್ನು ಹಿಡಿದುಕೊಂಡು ಮೊಸಳೆ ನೀರೊಳಗೆ ಮುಳುಗಿದ ದೃಶ್ಯ ಹರಿದಾಡುತ್ತಿತ್ತು. ಈಗ ಇಲ್ಲೂ ಅಂತಹ ಅಪಾಯ ತಪ್ಪಿಸಲು ಕ್ರಮ ಆಗಬೇಕಿದೆ. ಜಾಗೃತಿ ಮೂಡಬೇಕಿದೆ.
ಈ ಕಾರಣದಿಂದ ಅರಣ್ಯ ಇಲಾಖೆ ಹಾಗೂ ಸ್ಥಳೀಯ ಪಂಚಾಯತ್ ಗಮನಿಸಿ ಸೂಚನಾ ಫಲಕ ಅಳವಡಿಕೆ ಮಾಡಬೇಕಿದೆ. ಎಚ್ಚರಿಕಾ ಫಲಕ ಅಳವಡಿಕೆ ಬಗ್ಗೆ ನಾಕೂರು ಗಯ ಹಿತರಕ್ಷಣಾ ವೇದಿಕೆಯೂ ಗಮನಹರಿಸಬೇಕಿದೆ.
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
View Comments
ಮಾಹಿತಿಪೂರ್ಣ