Advertisement
Exclusive - Mirror Hunt

ಎಚ್ಚರಿಕೆ…. ನಾಕೂರುಗಯದಲ್ಲಿ ಮೊಸಳೆ ಇದೆ….!

Share

ಪಂಜ: ಎಚ್ಚರಿಕೆ…. ಎಚ್ಚರಿಕೆ… ಕಡಬ ತಾಲೂಕಿನ ನಾಕೂರುಗಯದಲ್ಲಿ  ಮೊಸಳೆ ಇದೆ. ತೀರ್ಥಸ್ನಾನ ಮಾಡುವ ಭಕ್ತರೇ, ನದಿಗೆ ಹಾಲೆರೆಯುವ ಭಕ್ತರೇ ಸ್ವಲ್ಪ ಗಮನಿಸಿಕೊಳ್ಳಿ.

 

ಕಡಬ ತಾಲೂಕಿನ ಪುಳಿಕುಕ್ಕು ಬಳಿಯ ನಾಕೂರುಗಯದಲ್ಲಿ ಮೊಸಳೆ ಕಂಡುಬಂದಿದೆ. ಈ ಮೊಸಳೆ ಗಯದಲ್ಲಿ ಮಾತ್ರವಲ್ಲ ಪುಳಿಕುಕ್ಕು ಪ್ರದೇಶದ ಕುಮಾರಧಾರಾ ನದಿಯಲ್ಲಿ  ಓಡಾಡುತ್ತಿರುತ್ತದೆ ಎಂದು ಈಗ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಕಳೆದ ವರ್ಷ ನದಿ ಸಮೀಪದ ಕೃಷಿಕರ ನಾಯಿಯನ್ನು ಹಿಡಿದಿದೆ ಎಂದೂ ತಿಳಿಸಿದ್ದಾರೆ.

ನಾಕೂರುಗಯಕ್ಕೆ ಅನೇಕ ಭಕ್ತಾದಿಗಳು ಪ್ರತಿದಿನ ಆಗಮಿಸುತ್ತಾರೆ. ತೀರ್ಥಸ್ನಾನ ಮಾಡಲು ಆಗಮಿಸಿದರೆ, ಇನ್ನೂ ಕೆಲವರು ನದಿಗೆ ಹಾಲು ಬಿಡಲು ಆಗಮಿಸುತ್ತಾರೆ. ಈ ನಾಕೂರುಗಯದಲ್ಲಿ ನೀರಿನ ಒಳಗಡೆ ದೇವಸ್ಥಾನ ಇದೆ ಎಂಬ ನಂಬಿಕೆ ಭಕ್ತರಲ್ಲಿದೆ ಇದೆ. ಹೀಗಾಗಿ ಭಕ್ತಿಯಿಂದ ಆಗಮಿಸುವ ಜನರಿಗೆ ಮೊಸಳೆಯ ಸಂಗತಿ ತಿಳಿಯದೆ ನೀರಿಗೆ ಇಳಿಯುವ ಸಂದರ್ಭ ಅಪಾಯ ಆಗುವ ಸಾಧ್ಯತೆ ಇದೆ. ಈ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಮೊಸಳೆ ವ್ಯಕ್ತಿಯನ್ನು ಹಿಡಿದುಕೊಂಡು ಮೊಸಳೆ ನೀರೊಳಗೆ ಮುಳುಗಿದ ದೃಶ್ಯ ಹರಿದಾಡುತ್ತಿತ್ತು. ಈಗ ಇಲ್ಲೂ ಅಂತಹ ಅಪಾಯ ತಪ್ಪಿಸಲು ಕ್ರಮ ಆಗಬೇಕಿದೆ. ಜಾಗೃತಿ ಮೂಡಬೇಕಿದೆ.

ಈ ಕಾರಣದಿಂದ ಅರಣ್ಯ ಇಲಾಖೆ ಹಾಗೂ ಸ್ಥಳೀಯ ಪಂಚಾಯತ್ ಗಮನಿಸಿ ಸೂಚನಾ ಫಲಕ ಅಳವಡಿಕೆ ಮಾಡಬೇಕಿದೆ. ಎಚ್ಚರಿಕಾ ಫಲಕ ಅಳವಡಿಕೆ ಬಗ್ಗೆ ನಾಕೂರು ಗಯ ಹಿತರಕ್ಷಣಾ ವೇದಿಕೆಯೂ ಗಮನಹರಿಸಬೇಕಿದೆ.

 

  • ಚಿತ್ರ ಕೃಪೆ: ಶಿವಸುಬ್ರಹ್ಮಣ್ಯ  ಕಲ್ಮಡ್ಕ , ಪತ್ರಕರ್ತ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಎಲೆಚುಕ್ಕೆ ರೋಗ | ತಕ್ಷಣದ ಪರಿಹಾರಕ್ಕಿಂತ ವೈಜ್ಞಾನಿಕ ನಿರ್ವಹಣೆ ಮುಖ್ಯ | 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ ಪರಿಹಾರ

ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…

1 hour ago

ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ

ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…

5 hours ago

ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ

ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…

5 hours ago

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

17 hours ago

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

1 day ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

2 days ago