Advertisement
Exclusive - Mirror Hunt

ಎಚ್ಚರಿಕೆ…. ನಾಕೂರುಗಯದಲ್ಲಿ ಮೊಸಳೆ ಇದೆ….!

Share

ಪಂಜ: ಎಚ್ಚರಿಕೆ…. ಎಚ್ಚರಿಕೆ… ಕಡಬ ತಾಲೂಕಿನ ನಾಕೂರುಗಯದಲ್ಲಿ  ಮೊಸಳೆ ಇದೆ. ತೀರ್ಥಸ್ನಾನ ಮಾಡುವ ಭಕ್ತರೇ, ನದಿಗೆ ಹಾಲೆರೆಯುವ ಭಕ್ತರೇ ಸ್ವಲ್ಪ ಗಮನಿಸಿಕೊಳ್ಳಿ.

Advertisement

 

ಕಡಬ ತಾಲೂಕಿನ ಪುಳಿಕುಕ್ಕು ಬಳಿಯ ನಾಕೂರುಗಯದಲ್ಲಿ ಮೊಸಳೆ ಕಂಡುಬಂದಿದೆ. ಈ ಮೊಸಳೆ ಗಯದಲ್ಲಿ ಮಾತ್ರವಲ್ಲ ಪುಳಿಕುಕ್ಕು ಪ್ರದೇಶದ ಕುಮಾರಧಾರಾ ನದಿಯಲ್ಲಿ  ಓಡಾಡುತ್ತಿರುತ್ತದೆ ಎಂದು ಈಗ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಕಳೆದ ವರ್ಷ ನದಿ ಸಮೀಪದ ಕೃಷಿಕರ ನಾಯಿಯನ್ನು ಹಿಡಿದಿದೆ ಎಂದೂ ತಿಳಿಸಿದ್ದಾರೆ.

ನಾಕೂರುಗಯಕ್ಕೆ ಅನೇಕ ಭಕ್ತಾದಿಗಳು ಪ್ರತಿದಿನ ಆಗಮಿಸುತ್ತಾರೆ. ತೀರ್ಥಸ್ನಾನ ಮಾಡಲು ಆಗಮಿಸಿದರೆ, ಇನ್ನೂ ಕೆಲವರು ನದಿಗೆ ಹಾಲು ಬಿಡಲು ಆಗಮಿಸುತ್ತಾರೆ. ಈ ನಾಕೂರುಗಯದಲ್ಲಿ ನೀರಿನ ಒಳಗಡೆ ದೇವಸ್ಥಾನ ಇದೆ ಎಂಬ ನಂಬಿಕೆ ಭಕ್ತರಲ್ಲಿದೆ ಇದೆ. ಹೀಗಾಗಿ ಭಕ್ತಿಯಿಂದ ಆಗಮಿಸುವ ಜನರಿಗೆ ಮೊಸಳೆಯ ಸಂಗತಿ ತಿಳಿಯದೆ ನೀರಿಗೆ ಇಳಿಯುವ ಸಂದರ್ಭ ಅಪಾಯ ಆಗುವ ಸಾಧ್ಯತೆ ಇದೆ. ಈ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಮೊಸಳೆ ವ್ಯಕ್ತಿಯನ್ನು ಹಿಡಿದುಕೊಂಡು ಮೊಸಳೆ ನೀರೊಳಗೆ ಮುಳುಗಿದ ದೃಶ್ಯ ಹರಿದಾಡುತ್ತಿತ್ತು. ಈಗ ಇಲ್ಲೂ ಅಂತಹ ಅಪಾಯ ತಪ್ಪಿಸಲು ಕ್ರಮ ಆಗಬೇಕಿದೆ. ಜಾಗೃತಿ ಮೂಡಬೇಕಿದೆ.

ಈ ಕಾರಣದಿಂದ ಅರಣ್ಯ ಇಲಾಖೆ ಹಾಗೂ ಸ್ಥಳೀಯ ಪಂಚಾಯತ್ ಗಮನಿಸಿ ಸೂಚನಾ ಫಲಕ ಅಳವಡಿಕೆ ಮಾಡಬೇಕಿದೆ. ಎಚ್ಚರಿಕಾ ಫಲಕ ಅಳವಡಿಕೆ ಬಗ್ಗೆ ನಾಕೂರು ಗಯ ಹಿತರಕ್ಷಣಾ ವೇದಿಕೆಯೂ ಗಮನಹರಿಸಬೇಕಿದೆ.

 

  • ಚಿತ್ರ ಕೃಪೆ: ಶಿವಸುಬ್ರಹ್ಮಣ್ಯ  ಕಲ್ಮಡ್ಕ , ಪತ್ರಕರ್ತ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

9 hours ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

9 hours ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

22 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

1 day ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

1 day ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

1 day ago