Advertisement
Exclusive - Mirror Hunt

ಎಚ್ಚರಿಕೆ…. ನಾಕೂರುಗಯದಲ್ಲಿ ಮೊಸಳೆ ಇದೆ….!

Share

ಪಂಜ: ಎಚ್ಚರಿಕೆ…. ಎಚ್ಚರಿಕೆ… ಕಡಬ ತಾಲೂಕಿನ ನಾಕೂರುಗಯದಲ್ಲಿ  ಮೊಸಳೆ ಇದೆ. ತೀರ್ಥಸ್ನಾನ ಮಾಡುವ ಭಕ್ತರೇ, ನದಿಗೆ ಹಾಲೆರೆಯುವ ಭಕ್ತರೇ ಸ್ವಲ್ಪ ಗಮನಿಸಿಕೊಳ್ಳಿ.

 

ಕಡಬ ತಾಲೂಕಿನ ಪುಳಿಕುಕ್ಕು ಬಳಿಯ ನಾಕೂರುಗಯದಲ್ಲಿ ಮೊಸಳೆ ಕಂಡುಬಂದಿದೆ. ಈ ಮೊಸಳೆ ಗಯದಲ್ಲಿ ಮಾತ್ರವಲ್ಲ ಪುಳಿಕುಕ್ಕು ಪ್ರದೇಶದ ಕುಮಾರಧಾರಾ ನದಿಯಲ್ಲಿ  ಓಡಾಡುತ್ತಿರುತ್ತದೆ ಎಂದು ಈಗ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಕಳೆದ ವರ್ಷ ನದಿ ಸಮೀಪದ ಕೃಷಿಕರ ನಾಯಿಯನ್ನು ಹಿಡಿದಿದೆ ಎಂದೂ ತಿಳಿಸಿದ್ದಾರೆ.

ನಾಕೂರುಗಯಕ್ಕೆ ಅನೇಕ ಭಕ್ತಾದಿಗಳು ಪ್ರತಿದಿನ ಆಗಮಿಸುತ್ತಾರೆ. ತೀರ್ಥಸ್ನಾನ ಮಾಡಲು ಆಗಮಿಸಿದರೆ, ಇನ್ನೂ ಕೆಲವರು ನದಿಗೆ ಹಾಲು ಬಿಡಲು ಆಗಮಿಸುತ್ತಾರೆ. ಈ ನಾಕೂರುಗಯದಲ್ಲಿ ನೀರಿನ ಒಳಗಡೆ ದೇವಸ್ಥಾನ ಇದೆ ಎಂಬ ನಂಬಿಕೆ ಭಕ್ತರಲ್ಲಿದೆ ಇದೆ. ಹೀಗಾಗಿ ಭಕ್ತಿಯಿಂದ ಆಗಮಿಸುವ ಜನರಿಗೆ ಮೊಸಳೆಯ ಸಂಗತಿ ತಿಳಿಯದೆ ನೀರಿಗೆ ಇಳಿಯುವ ಸಂದರ್ಭ ಅಪಾಯ ಆಗುವ ಸಾಧ್ಯತೆ ಇದೆ. ಈ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಮೊಸಳೆ ವ್ಯಕ್ತಿಯನ್ನು ಹಿಡಿದುಕೊಂಡು ಮೊಸಳೆ ನೀರೊಳಗೆ ಮುಳುಗಿದ ದೃಶ್ಯ ಹರಿದಾಡುತ್ತಿತ್ತು. ಈಗ ಇಲ್ಲೂ ಅಂತಹ ಅಪಾಯ ತಪ್ಪಿಸಲು ಕ್ರಮ ಆಗಬೇಕಿದೆ. ಜಾಗೃತಿ ಮೂಡಬೇಕಿದೆ.

ಈ ಕಾರಣದಿಂದ ಅರಣ್ಯ ಇಲಾಖೆ ಹಾಗೂ ಸ್ಥಳೀಯ ಪಂಚಾಯತ್ ಗಮನಿಸಿ ಸೂಚನಾ ಫಲಕ ಅಳವಡಿಕೆ ಮಾಡಬೇಕಿದೆ. ಎಚ್ಚರಿಕಾ ಫಲಕ ಅಳವಡಿಕೆ ಬಗ್ಗೆ ನಾಕೂರು ಗಯ ಹಿತರಕ್ಷಣಾ ವೇದಿಕೆಯೂ ಗಮನಹರಿಸಬೇಕಿದೆ.

 

  • ಚಿತ್ರ ಕೃಪೆ: ಶಿವಸುಬ್ರಹ್ಮಣ್ಯ  ಕಲ್ಮಡ್ಕ , ಪತ್ರಕರ್ತ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

3 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

10 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago