ಪಂಜ: ಎಚ್ಚರಿಕೆ…. ಎಚ್ಚರಿಕೆ… ಕಡಬ ತಾಲೂಕಿನ ನಾಕೂರುಗಯದಲ್ಲಿ ಮೊಸಳೆ ಇದೆ. ತೀರ್ಥಸ್ನಾನ ಮಾಡುವ ಭಕ್ತರೇ, ನದಿಗೆ ಹಾಲೆರೆಯುವ ಭಕ್ತರೇ ಸ್ವಲ್ಪ ಗಮನಿಸಿಕೊಳ್ಳಿ.
ಕಡಬ ತಾಲೂಕಿನ ಪುಳಿಕುಕ್ಕು ಬಳಿಯ ನಾಕೂರುಗಯದಲ್ಲಿ ಮೊಸಳೆ ಕಂಡುಬಂದಿದೆ. ಈ ಮೊಸಳೆ ಗಯದಲ್ಲಿ ಮಾತ್ರವಲ್ಲ ಪುಳಿಕುಕ್ಕು ಪ್ರದೇಶದ ಕುಮಾರಧಾರಾ ನದಿಯಲ್ಲಿ ಓಡಾಡುತ್ತಿರುತ್ತದೆ ಎಂದು ಈಗ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಕಳೆದ ವರ್ಷ ನದಿ ಸಮೀಪದ ಕೃಷಿಕರ ನಾಯಿಯನ್ನು ಹಿಡಿದಿದೆ ಎಂದೂ ತಿಳಿಸಿದ್ದಾರೆ.
ನಾಕೂರುಗಯಕ್ಕೆ ಅನೇಕ ಭಕ್ತಾದಿಗಳು ಪ್ರತಿದಿನ ಆಗಮಿಸುತ್ತಾರೆ. ತೀರ್ಥಸ್ನಾನ ಮಾಡಲು ಆಗಮಿಸಿದರೆ, ಇನ್ನೂ ಕೆಲವರು ನದಿಗೆ ಹಾಲು ಬಿಡಲು ಆಗಮಿಸುತ್ತಾರೆ. ಈ ನಾಕೂರುಗಯದಲ್ಲಿ ನೀರಿನ ಒಳಗಡೆ ದೇವಸ್ಥಾನ ಇದೆ ಎಂಬ ನಂಬಿಕೆ ಭಕ್ತರಲ್ಲಿದೆ ಇದೆ. ಹೀಗಾಗಿ ಭಕ್ತಿಯಿಂದ ಆಗಮಿಸುವ ಜನರಿಗೆ ಮೊಸಳೆಯ ಸಂಗತಿ ತಿಳಿಯದೆ ನೀರಿಗೆ ಇಳಿಯುವ ಸಂದರ್ಭ ಅಪಾಯ ಆಗುವ ಸಾಧ್ಯತೆ ಇದೆ. ಈ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಮೊಸಳೆ ವ್ಯಕ್ತಿಯನ್ನು ಹಿಡಿದುಕೊಂಡು ಮೊಸಳೆ ನೀರೊಳಗೆ ಮುಳುಗಿದ ದೃಶ್ಯ ಹರಿದಾಡುತ್ತಿತ್ತು. ಈಗ ಇಲ್ಲೂ ಅಂತಹ ಅಪಾಯ ತಪ್ಪಿಸಲು ಕ್ರಮ ಆಗಬೇಕಿದೆ. ಜಾಗೃತಿ ಮೂಡಬೇಕಿದೆ.
ಈ ಕಾರಣದಿಂದ ಅರಣ್ಯ ಇಲಾಖೆ ಹಾಗೂ ಸ್ಥಳೀಯ ಪಂಚಾಯತ್ ಗಮನಿಸಿ ಸೂಚನಾ ಫಲಕ ಅಳವಡಿಕೆ ಮಾಡಬೇಕಿದೆ. ಎಚ್ಚರಿಕಾ ಫಲಕ ಅಳವಡಿಕೆ ಬಗ್ಗೆ ನಾಕೂರು ಗಯ ಹಿತರಕ್ಷಣಾ ವೇದಿಕೆಯೂ ಗಮನಹರಿಸಬೇಕಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
View Comments
ಮಾಹಿತಿಪೂರ್ಣ