Advertisement
Exclusive - Mirror Hunt

ಎಚ್ಚರಿಕೆ…. ನಾಕೂರುಗಯದಲ್ಲಿ ಮೊಸಳೆ ಇದೆ….!

Share

ಪಂಜ: ಎಚ್ಚರಿಕೆ…. ಎಚ್ಚರಿಕೆ… ಕಡಬ ತಾಲೂಕಿನ ನಾಕೂರುಗಯದಲ್ಲಿ  ಮೊಸಳೆ ಇದೆ. ತೀರ್ಥಸ್ನಾನ ಮಾಡುವ ಭಕ್ತರೇ, ನದಿಗೆ ಹಾಲೆರೆಯುವ ಭಕ್ತರೇ ಸ್ವಲ್ಪ ಗಮನಿಸಿಕೊಳ್ಳಿ.

 

ಕಡಬ ತಾಲೂಕಿನ ಪುಳಿಕುಕ್ಕು ಬಳಿಯ ನಾಕೂರುಗಯದಲ್ಲಿ ಮೊಸಳೆ ಕಂಡುಬಂದಿದೆ. ಈ ಮೊಸಳೆ ಗಯದಲ್ಲಿ ಮಾತ್ರವಲ್ಲ ಪುಳಿಕುಕ್ಕು ಪ್ರದೇಶದ ಕುಮಾರಧಾರಾ ನದಿಯಲ್ಲಿ  ಓಡಾಡುತ್ತಿರುತ್ತದೆ ಎಂದು ಈಗ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಕಳೆದ ವರ್ಷ ನದಿ ಸಮೀಪದ ಕೃಷಿಕರ ನಾಯಿಯನ್ನು ಹಿಡಿದಿದೆ ಎಂದೂ ತಿಳಿಸಿದ್ದಾರೆ.

ನಾಕೂರುಗಯಕ್ಕೆ ಅನೇಕ ಭಕ್ತಾದಿಗಳು ಪ್ರತಿದಿನ ಆಗಮಿಸುತ್ತಾರೆ. ತೀರ್ಥಸ್ನಾನ ಮಾಡಲು ಆಗಮಿಸಿದರೆ, ಇನ್ನೂ ಕೆಲವರು ನದಿಗೆ ಹಾಲು ಬಿಡಲು ಆಗಮಿಸುತ್ತಾರೆ. ಈ ನಾಕೂರುಗಯದಲ್ಲಿ ನೀರಿನ ಒಳಗಡೆ ದೇವಸ್ಥಾನ ಇದೆ ಎಂಬ ನಂಬಿಕೆ ಭಕ್ತರಲ್ಲಿದೆ ಇದೆ. ಹೀಗಾಗಿ ಭಕ್ತಿಯಿಂದ ಆಗಮಿಸುವ ಜನರಿಗೆ ಮೊಸಳೆಯ ಸಂಗತಿ ತಿಳಿಯದೆ ನೀರಿಗೆ ಇಳಿಯುವ ಸಂದರ್ಭ ಅಪಾಯ ಆಗುವ ಸಾಧ್ಯತೆ ಇದೆ. ಈ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಮೊಸಳೆ ವ್ಯಕ್ತಿಯನ್ನು ಹಿಡಿದುಕೊಂಡು ಮೊಸಳೆ ನೀರೊಳಗೆ ಮುಳುಗಿದ ದೃಶ್ಯ ಹರಿದಾಡುತ್ತಿತ್ತು. ಈಗ ಇಲ್ಲೂ ಅಂತಹ ಅಪಾಯ ತಪ್ಪಿಸಲು ಕ್ರಮ ಆಗಬೇಕಿದೆ. ಜಾಗೃತಿ ಮೂಡಬೇಕಿದೆ.

ಈ ಕಾರಣದಿಂದ ಅರಣ್ಯ ಇಲಾಖೆ ಹಾಗೂ ಸ್ಥಳೀಯ ಪಂಚಾಯತ್ ಗಮನಿಸಿ ಸೂಚನಾ ಫಲಕ ಅಳವಡಿಕೆ ಮಾಡಬೇಕಿದೆ. ಎಚ್ಚರಿಕಾ ಫಲಕ ಅಳವಡಿಕೆ ಬಗ್ಗೆ ನಾಕೂರು ಗಯ ಹಿತರಕ್ಷಣಾ ವೇದಿಕೆಯೂ ಗಮನಹರಿಸಬೇಕಿದೆ.

 

  • ಚಿತ್ರ ಕೃಪೆ: ಶಿವಸುಬ್ರಹ್ಮಣ್ಯ  ಕಲ್ಮಡ್ಕ , ಪತ್ರಕರ್ತ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

4 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

5 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago