ಪಂಜ: ಎಚ್ಚರಿಕೆ…. ಎಚ್ಚರಿಕೆ… ಕಡಬ ತಾಲೂಕಿನ ನಾಕೂರುಗಯದಲ್ಲಿ ಮೊಸಳೆ ಇದೆ. ತೀರ್ಥಸ್ನಾನ ಮಾಡುವ ಭಕ್ತರೇ, ನದಿಗೆ ಹಾಲೆರೆಯುವ ಭಕ್ತರೇ ಸ್ವಲ್ಪ ಗಮನಿಸಿಕೊಳ್ಳಿ.
ಕಡಬ ತಾಲೂಕಿನ ಪುಳಿಕುಕ್ಕು ಬಳಿಯ ನಾಕೂರುಗಯದಲ್ಲಿ ಮೊಸಳೆ ಕಂಡುಬಂದಿದೆ. ಈ ಮೊಸಳೆ ಗಯದಲ್ಲಿ ಮಾತ್ರವಲ್ಲ ಪುಳಿಕುಕ್ಕು ಪ್ರದೇಶದ ಕುಮಾರಧಾರಾ ನದಿಯಲ್ಲಿ ಓಡಾಡುತ್ತಿರುತ್ತದೆ ಎಂದು ಈಗ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಕಳೆದ ವರ್ಷ ನದಿ ಸಮೀಪದ ಕೃಷಿಕರ ನಾಯಿಯನ್ನು ಹಿಡಿದಿದೆ ಎಂದೂ ತಿಳಿಸಿದ್ದಾರೆ.
ನಾಕೂರುಗಯಕ್ಕೆ ಅನೇಕ ಭಕ್ತಾದಿಗಳು ಪ್ರತಿದಿನ ಆಗಮಿಸುತ್ತಾರೆ. ತೀರ್ಥಸ್ನಾನ ಮಾಡಲು ಆಗಮಿಸಿದರೆ, ಇನ್ನೂ ಕೆಲವರು ನದಿಗೆ ಹಾಲು ಬಿಡಲು ಆಗಮಿಸುತ್ತಾರೆ. ಈ ನಾಕೂರುಗಯದಲ್ಲಿ ನೀರಿನ ಒಳಗಡೆ ದೇವಸ್ಥಾನ ಇದೆ ಎಂಬ ನಂಬಿಕೆ ಭಕ್ತರಲ್ಲಿದೆ ಇದೆ. ಹೀಗಾಗಿ ಭಕ್ತಿಯಿಂದ ಆಗಮಿಸುವ ಜನರಿಗೆ ಮೊಸಳೆಯ ಸಂಗತಿ ತಿಳಿಯದೆ ನೀರಿಗೆ ಇಳಿಯುವ ಸಂದರ್ಭ ಅಪಾಯ ಆಗುವ ಸಾಧ್ಯತೆ ಇದೆ. ಈ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಮೊಸಳೆ ವ್ಯಕ್ತಿಯನ್ನು ಹಿಡಿದುಕೊಂಡು ಮೊಸಳೆ ನೀರೊಳಗೆ ಮುಳುಗಿದ ದೃಶ್ಯ ಹರಿದಾಡುತ್ತಿತ್ತು. ಈಗ ಇಲ್ಲೂ ಅಂತಹ ಅಪಾಯ ತಪ್ಪಿಸಲು ಕ್ರಮ ಆಗಬೇಕಿದೆ. ಜಾಗೃತಿ ಮೂಡಬೇಕಿದೆ.
ಈ ಕಾರಣದಿಂದ ಅರಣ್ಯ ಇಲಾಖೆ ಹಾಗೂ ಸ್ಥಳೀಯ ಪಂಚಾಯತ್ ಗಮನಿಸಿ ಸೂಚನಾ ಫಲಕ ಅಳವಡಿಕೆ ಮಾಡಬೇಕಿದೆ. ಎಚ್ಚರಿಕಾ ಫಲಕ ಅಳವಡಿಕೆ ಬಗ್ಗೆ ನಾಕೂರು ಗಯ ಹಿತರಕ್ಷಣಾ ವೇದಿಕೆಯೂ ಗಮನಹರಿಸಬೇಕಿದೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…
View Comments
ಮಾಹಿತಿಪೂರ್ಣ