ಎಚ್ ಡಿ ಕೋಟೆಯಲ್ಲಿ ಮತ್ತೊಂದು ಹುಲಿ ಸಾವು

June 24, 2019
7:01 PM

ಮಡಿಕೇರಿ/ಮೈಸೂರು:  ಮೈಸೂರು ಜಿಲ್ಲೆಯ  ಎಚ್ ಡಿ  ಕೋಟೆಯಲ್ಲಿ  ಸುಮಾರು 10 ವರ್ಷದ ಹೆಣ್ಣು ಹುಲಿಯೊಂದು  ಸಾವನ್ನಪ್ಪಿರುವುದು  ಸೋಮವಾರ ಬೆಳಕಿಗೆ ಬಂದಿದೆ. ಎರಡು ಹುಲಿಗಳ ನಡುವೆ ಕಾದಾಟವಾಗಿ ಗಾಯವಾಗಿ ಹುಲಿ ಸತ್ತಿರಬೇಕೆಂದು  ಈಗ ಶಂಕಿಸಲಾಗಿದೆ. ಎಚ್ ಡಿ ಕೋಟೆಯಿಂದ 15 ಕಿಮೀ ದೂರದ ಹೆಬ್ಬಾಳದಲ್ಲಿ ಹುಲಿ ಸಾವನ್ನಪ್ಪಿದೆ.

Advertisement
Advertisement
Advertisement

ಹುಲಿಗಳ ಕಾದಾಟದಿಂದಾಗಿ ಗಾಯಗೊಂಡು  ಆಹಾರ ಸೇವಿಸಲಾಗದೆ ಸತ್ತಿರಬಹುದು ಎಂದು ವೈದ್ಯರು ಶಂಕಿಸಿದ್ದು ಹೊಟ್ಟೆಯಲ್ಲಿ  ಆಹಾರ ಕಂಡುಬಾರದೇ ಇರುವುದು  ಶಂಕೆಯನ್ನು ಪುಷ್ಟಿಗೊಳಿಸಿದೆ.  ಬಂಡೀಪುರ ಹುಲಿ ಸಂರಕ್ಷಣಾ ಕೇಂದ್ರದಿಂದ 4 ಕಿಮೀ ದೂರದಲ್ಲಿ  ಹುಲಿ ಸಾವನ್ನಪ್ಪಿರುವುದು  ಬೆಳಕಿಗೆ ಬಂದಿದ್ದು  ಕೊಳೆತ ಸ್ಥಿತಿಯಲ್ಲಿ ಹುಲಿಯ ಶವ ಪತ್ತೆಯಾಗಿದೆ. ಕಳೆದ ವಾರವೂ ಹುಲಿ ಸಾವನ್ನಪ್ಪಿತ್ತು. ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ಕಳೆದ ಕೆಲವು ಸಮಯಗಳಿಂದ ಹುಲಿಗಳು ಸಾವನ್ನಪ್ಪುತ್ತಿರುವುದಕ್ಕೆ ಪರಿಸರ ಪ್ರೇಮಿಗಳು ಅನುಮಾನ ವ್ಯಕ್ತಪಡಿಸುತ್ತಾರೆ.

Advertisement

ಅರಣ್ಯ ಇಲಾಖೆಯ ಸಿಬಂದಿಗಳು ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ  ಡಿಸಿಎಫ್ ಡಾ.ಕೆ.ಸಿ.ಪ್ರಶಾಂತ್ ಕುಮಾರ್, ವಾರ್ಡನ್ ಕೃತಿಕಾ ಆಲನಹಳ್ಳಿ,  ಆರ್ ಎಫ್ ಒ  ಮಧು, ಪಶುವೈದ್ಯ ಡಾ.ಡಿ.ಎನ್.ನಾಗರಾಜು ಹಾಗೂ ಇನ್ನಿತರರು ಇದ್ದರು. ಹುಲಿಗಳ  ಸಾವಿಗೆ ನಿಖರ ಕಾರಣಗಳೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

 

Advertisement

 

Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೆಡಿಎಸ್‌ ಅಭ್ಯರ್ಥಿ, ಬಿಜೆಪಿ ಚಿಹ್ನೆ….! |ಡಾ.ಮಂಜುನಾಥ್‌ರನ್ನ ಬಿಜೆಪಿಯಿಂದ ನಿಲ್ಲಿಸಿದ್ದೇವೆ : ರಾಜಕೀಯ ತಂತ್ರಗಾರಿಕೆ ವರ್ಕೌಟ್‌ ಆಗಬೇಕು – ಹೆಚ್‌ ಡಿ ಕುಮಾರಸ್ವಾಮಿ
April 18, 2024
2:44 PM
by: The Rural Mirror ಸುದ್ದಿಜಾಲ
ದಕ್ಷಿಣ ಭಾರತದಲ್ಲಿ ಬೆಂಗಳೂರು ಏರ್‌ಪೋರ್ಟ್‌ಗೆ ಒಲಿದ ಏವಿಯೇಷನ್‌ ಹಬ್‌ ಆಗುವ ಭಾಗ್ಯ | ಏನಿದು ಏವಿಯೇಷನ್‌ ಹಬ್‌? | ಏರ್ ಇಂಡಿಯಾ ಘೋಷಣೆ
April 17, 2024
2:31 PM
by: The Rural Mirror ಸುದ್ದಿಜಾಲ
ಹಿರಿಯ ನಟ ದ್ವಾರಕೀಶ್ ನಿಧನ | ಕಂಬನಿ ಮಿಡಿದ ಚಿತ್ರರಂಗ ಹಾಗೂ ನಾಡಿನ ಗಣ್ಯರು
April 16, 2024
12:54 PM
by: The Rural Mirror ಸುದ್ದಿಜಾಲ
ರಾಜ್ಯಕ್ಕೆ ಸ್ಟಾರ್‌ ಪ್ರಚಾರಕರ ದಂಡು | ಮೋದಿ ಬೆನ್ನಲ್ಲೇ ಕರ್ನಾಟಕಕ್ಕೆ ರಾಹುಲ್ ಗಾಂಧಿ | ಯಾವೆಲ್ಲಾ ಕ್ಷೇತ್ರದಲ್ಲಿ ರಾಹುಲ್ ಮತಬೇಟೆ..?
April 11, 2024
11:10 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror