ಮಡಿಕೇರಿ/ಮೈಸೂರು: ಮೈಸೂರು ಜಿಲ್ಲೆಯ ಎಚ್ ಡಿ ಕೋಟೆಯಲ್ಲಿ ಸುಮಾರು 10 ವರ್ಷದ ಹೆಣ್ಣು ಹುಲಿಯೊಂದು ಸಾವನ್ನಪ್ಪಿರುವುದು ಸೋಮವಾರ ಬೆಳಕಿಗೆ ಬಂದಿದೆ. ಎರಡು ಹುಲಿಗಳ ನಡುವೆ ಕಾದಾಟವಾಗಿ ಗಾಯವಾಗಿ ಹುಲಿ ಸತ್ತಿರಬೇಕೆಂದು ಈಗ ಶಂಕಿಸಲಾಗಿದೆ. ಎಚ್ ಡಿ ಕೋಟೆಯಿಂದ 15 ಕಿಮೀ ದೂರದ ಹೆಬ್ಬಾಳದಲ್ಲಿ ಹುಲಿ ಸಾವನ್ನಪ್ಪಿದೆ.
ಹುಲಿಗಳ ಕಾದಾಟದಿಂದಾಗಿ ಗಾಯಗೊಂಡು ಆಹಾರ ಸೇವಿಸಲಾಗದೆ ಸತ್ತಿರಬಹುದು ಎಂದು ವೈದ್ಯರು ಶಂಕಿಸಿದ್ದು ಹೊಟ್ಟೆಯಲ್ಲಿ ಆಹಾರ ಕಂಡುಬಾರದೇ ಇರುವುದು ಶಂಕೆಯನ್ನು ಪುಷ್ಟಿಗೊಳಿಸಿದೆ. ಬಂಡೀಪುರ ಹುಲಿ ಸಂರಕ್ಷಣಾ ಕೇಂದ್ರದಿಂದ 4 ಕಿಮೀ ದೂರದಲ್ಲಿ ಹುಲಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದ್ದು ಕೊಳೆತ ಸ್ಥಿತಿಯಲ್ಲಿ ಹುಲಿಯ ಶವ ಪತ್ತೆಯಾಗಿದೆ. ಕಳೆದ ವಾರವೂ ಹುಲಿ ಸಾವನ್ನಪ್ಪಿತ್ತು. ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ಕಳೆದ ಕೆಲವು ಸಮಯಗಳಿಂದ ಹುಲಿಗಳು ಸಾವನ್ನಪ್ಪುತ್ತಿರುವುದಕ್ಕೆ ಪರಿಸರ ಪ್ರೇಮಿಗಳು ಅನುಮಾನ ವ್ಯಕ್ತಪಡಿಸುತ್ತಾರೆ.
ಅರಣ್ಯ ಇಲಾಖೆಯ ಸಿಬಂದಿಗಳು ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಡಿಸಿಎಫ್ ಡಾ.ಕೆ.ಸಿ.ಪ್ರಶಾಂತ್ ಕುಮಾರ್, ವಾರ್ಡನ್ ಕೃತಿಕಾ ಆಲನಹಳ್ಳಿ, ಆರ್ ಎಫ್ ಒ ಮಧು, ಪಶುವೈದ್ಯ ಡಾ.ಡಿ.ಎನ್.ನಾಗರಾಜು ಹಾಗೂ ಇನ್ನಿತರರು ಇದ್ದರು. ಹುಲಿಗಳ ಸಾವಿಗೆ ನಿಖರ ಕಾರಣಗಳೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…