ಮಡಿಕೇರಿ/ಮೈಸೂರು: ಮೈಸೂರು ಜಿಲ್ಲೆಯ ಎಚ್ ಡಿ ಕೋಟೆಯಲ್ಲಿ ಸುಮಾರು 10 ವರ್ಷದ ಹೆಣ್ಣು ಹುಲಿಯೊಂದು ಸಾವನ್ನಪ್ಪಿರುವುದು ಸೋಮವಾರ ಬೆಳಕಿಗೆ ಬಂದಿದೆ. ಎರಡು ಹುಲಿಗಳ ನಡುವೆ ಕಾದಾಟವಾಗಿ ಗಾಯವಾಗಿ ಹುಲಿ ಸತ್ತಿರಬೇಕೆಂದು ಈಗ ಶಂಕಿಸಲಾಗಿದೆ. ಎಚ್ ಡಿ ಕೋಟೆಯಿಂದ 15 ಕಿಮೀ ದೂರದ ಹೆಬ್ಬಾಳದಲ್ಲಿ ಹುಲಿ ಸಾವನ್ನಪ್ಪಿದೆ.
ಹುಲಿಗಳ ಕಾದಾಟದಿಂದಾಗಿ ಗಾಯಗೊಂಡು ಆಹಾರ ಸೇವಿಸಲಾಗದೆ ಸತ್ತಿರಬಹುದು ಎಂದು ವೈದ್ಯರು ಶಂಕಿಸಿದ್ದು ಹೊಟ್ಟೆಯಲ್ಲಿ ಆಹಾರ ಕಂಡುಬಾರದೇ ಇರುವುದು ಶಂಕೆಯನ್ನು ಪುಷ್ಟಿಗೊಳಿಸಿದೆ. ಬಂಡೀಪುರ ಹುಲಿ ಸಂರಕ್ಷಣಾ ಕೇಂದ್ರದಿಂದ 4 ಕಿಮೀ ದೂರದಲ್ಲಿ ಹುಲಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದ್ದು ಕೊಳೆತ ಸ್ಥಿತಿಯಲ್ಲಿ ಹುಲಿಯ ಶವ ಪತ್ತೆಯಾಗಿದೆ. ಕಳೆದ ವಾರವೂ ಹುಲಿ ಸಾವನ್ನಪ್ಪಿತ್ತು. ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ಕಳೆದ ಕೆಲವು ಸಮಯಗಳಿಂದ ಹುಲಿಗಳು ಸಾವನ್ನಪ್ಪುತ್ತಿರುವುದಕ್ಕೆ ಪರಿಸರ ಪ್ರೇಮಿಗಳು ಅನುಮಾನ ವ್ಯಕ್ತಪಡಿಸುತ್ತಾರೆ.
ಅರಣ್ಯ ಇಲಾಖೆಯ ಸಿಬಂದಿಗಳು ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಡಿಸಿಎಫ್ ಡಾ.ಕೆ.ಸಿ.ಪ್ರಶಾಂತ್ ಕುಮಾರ್, ವಾರ್ಡನ್ ಕೃತಿಕಾ ಆಲನಹಳ್ಳಿ, ಆರ್ ಎಫ್ ಒ ಮಧು, ಪಶುವೈದ್ಯ ಡಾ.ಡಿ.ಎನ್.ನಾಗರಾಜು ಹಾಗೂ ಇನ್ನಿತರರು ಇದ್ದರು. ಹುಲಿಗಳ ಸಾವಿಗೆ ನಿಖರ ಕಾರಣಗಳೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490
ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…
ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…
ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…
ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ…