Advertisement
ರಾಜ್ಯ

ಎಚ್ ಡಿ ಕೋಟೆಯಲ್ಲಿ ಮತ್ತೊಂದು ಹುಲಿ ಸಾವು

Share

ಮಡಿಕೇರಿ/ಮೈಸೂರು:  ಮೈಸೂರು ಜಿಲ್ಲೆಯ  ಎಚ್ ಡಿ  ಕೋಟೆಯಲ್ಲಿ  ಸುಮಾರು 10 ವರ್ಷದ ಹೆಣ್ಣು ಹುಲಿಯೊಂದು  ಸಾವನ್ನಪ್ಪಿರುವುದು  ಸೋಮವಾರ ಬೆಳಕಿಗೆ ಬಂದಿದೆ. ಎರಡು ಹುಲಿಗಳ ನಡುವೆ ಕಾದಾಟವಾಗಿ ಗಾಯವಾಗಿ ಹುಲಿ ಸತ್ತಿರಬೇಕೆಂದು  ಈಗ ಶಂಕಿಸಲಾಗಿದೆ. ಎಚ್ ಡಿ ಕೋಟೆಯಿಂದ 15 ಕಿಮೀ ದೂರದ ಹೆಬ್ಬಾಳದಲ್ಲಿ ಹುಲಿ ಸಾವನ್ನಪ್ಪಿದೆ.

Advertisement

ಹುಲಿಗಳ ಕಾದಾಟದಿಂದಾಗಿ ಗಾಯಗೊಂಡು  ಆಹಾರ ಸೇವಿಸಲಾಗದೆ ಸತ್ತಿರಬಹುದು ಎಂದು ವೈದ್ಯರು ಶಂಕಿಸಿದ್ದು ಹೊಟ್ಟೆಯಲ್ಲಿ  ಆಹಾರ ಕಂಡುಬಾರದೇ ಇರುವುದು  ಶಂಕೆಯನ್ನು ಪುಷ್ಟಿಗೊಳಿಸಿದೆ.  ಬಂಡೀಪುರ ಹುಲಿ ಸಂರಕ್ಷಣಾ ಕೇಂದ್ರದಿಂದ 4 ಕಿಮೀ ದೂರದಲ್ಲಿ  ಹುಲಿ ಸಾವನ್ನಪ್ಪಿರುವುದು  ಬೆಳಕಿಗೆ ಬಂದಿದ್ದು  ಕೊಳೆತ ಸ್ಥಿತಿಯಲ್ಲಿ ಹುಲಿಯ ಶವ ಪತ್ತೆಯಾಗಿದೆ. ಕಳೆದ ವಾರವೂ ಹುಲಿ ಸಾವನ್ನಪ್ಪಿತ್ತು. ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ಕಳೆದ ಕೆಲವು ಸಮಯಗಳಿಂದ ಹುಲಿಗಳು ಸಾವನ್ನಪ್ಪುತ್ತಿರುವುದಕ್ಕೆ ಪರಿಸರ ಪ್ರೇಮಿಗಳು ಅನುಮಾನ ವ್ಯಕ್ತಪಡಿಸುತ್ತಾರೆ.

ಅರಣ್ಯ ಇಲಾಖೆಯ ಸಿಬಂದಿಗಳು ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ  ಡಿಸಿಎಫ್ ಡಾ.ಕೆ.ಸಿ.ಪ್ರಶಾಂತ್ ಕುಮಾರ್, ವಾರ್ಡನ್ ಕೃತಿಕಾ ಆಲನಹಳ್ಳಿ,  ಆರ್ ಎಫ್ ಒ  ಮಧು, ಪಶುವೈದ್ಯ ಡಾ.ಡಿ.ಎನ್.ನಾಗರಾಜು ಹಾಗೂ ಇನ್ನಿತರರು ಇದ್ದರು. ಹುಲಿಗಳ  ಸಾವಿಗೆ ನಿಖರ ಕಾರಣಗಳೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ

ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…

3 hours ago

ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ

ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…

4 hours ago

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

15 hours ago

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

19 hours ago

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…

19 hours ago

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

1 day ago