ಮಡಿಕೇರಿ/ಮೈಸೂರು: ಮೈಸೂರು ಜಿಲ್ಲೆಯ ಎಚ್ ಡಿ ಕೋಟೆಯಲ್ಲಿ ಸುಮಾರು 10 ವರ್ಷದ ಹೆಣ್ಣು ಹುಲಿಯೊಂದು ಸಾವನ್ನಪ್ಪಿರುವುದು ಸೋಮವಾರ ಬೆಳಕಿಗೆ ಬಂದಿದೆ. ಎರಡು ಹುಲಿಗಳ ನಡುವೆ ಕಾದಾಟವಾಗಿ ಗಾಯವಾಗಿ ಹುಲಿ ಸತ್ತಿರಬೇಕೆಂದು ಈಗ ಶಂಕಿಸಲಾಗಿದೆ. ಎಚ್ ಡಿ ಕೋಟೆಯಿಂದ 15 ಕಿಮೀ ದೂರದ ಹೆಬ್ಬಾಳದಲ್ಲಿ ಹುಲಿ ಸಾವನ್ನಪ್ಪಿದೆ.
ಹುಲಿಗಳ ಕಾದಾಟದಿಂದಾಗಿ ಗಾಯಗೊಂಡು ಆಹಾರ ಸೇವಿಸಲಾಗದೆ ಸತ್ತಿರಬಹುದು ಎಂದು ವೈದ್ಯರು ಶಂಕಿಸಿದ್ದು ಹೊಟ್ಟೆಯಲ್ಲಿ ಆಹಾರ ಕಂಡುಬಾರದೇ ಇರುವುದು ಶಂಕೆಯನ್ನು ಪುಷ್ಟಿಗೊಳಿಸಿದೆ. ಬಂಡೀಪುರ ಹುಲಿ ಸಂರಕ್ಷಣಾ ಕೇಂದ್ರದಿಂದ 4 ಕಿಮೀ ದೂರದಲ್ಲಿ ಹುಲಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದ್ದು ಕೊಳೆತ ಸ್ಥಿತಿಯಲ್ಲಿ ಹುಲಿಯ ಶವ ಪತ್ತೆಯಾಗಿದೆ. ಕಳೆದ ವಾರವೂ ಹುಲಿ ಸಾವನ್ನಪ್ಪಿತ್ತು. ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ಕಳೆದ ಕೆಲವು ಸಮಯಗಳಿಂದ ಹುಲಿಗಳು ಸಾವನ್ನಪ್ಪುತ್ತಿರುವುದಕ್ಕೆ ಪರಿಸರ ಪ್ರೇಮಿಗಳು ಅನುಮಾನ ವ್ಯಕ್ತಪಡಿಸುತ್ತಾರೆ.
ಅರಣ್ಯ ಇಲಾಖೆಯ ಸಿಬಂದಿಗಳು ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಡಿಸಿಎಫ್ ಡಾ.ಕೆ.ಸಿ.ಪ್ರಶಾಂತ್ ಕುಮಾರ್, ವಾರ್ಡನ್ ಕೃತಿಕಾ ಆಲನಹಳ್ಳಿ, ಆರ್ ಎಫ್ ಒ ಮಧು, ಪಶುವೈದ್ಯ ಡಾ.ಡಿ.ಎನ್.ನಾಗರಾಜು ಹಾಗೂ ಇನ್ನಿತರರು ಇದ್ದರು. ಹುಲಿಗಳ ಸಾವಿಗೆ ನಿಖರ ಕಾರಣಗಳೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…