ಮಡಿಕೇರಿ/ಮೈಸೂರು: ಮೈಸೂರು ಜಿಲ್ಲೆಯ ಎಚ್ ಡಿ ಕೋಟೆಯಲ್ಲಿ ಸುಮಾರು 10 ವರ್ಷದ ಹೆಣ್ಣು ಹುಲಿಯೊಂದು ಸಾವನ್ನಪ್ಪಿರುವುದು ಸೋಮವಾರ ಬೆಳಕಿಗೆ ಬಂದಿದೆ. ಎರಡು ಹುಲಿಗಳ ನಡುವೆ ಕಾದಾಟವಾಗಿ ಗಾಯವಾಗಿ ಹುಲಿ ಸತ್ತಿರಬೇಕೆಂದು ಈಗ ಶಂಕಿಸಲಾಗಿದೆ. ಎಚ್ ಡಿ ಕೋಟೆಯಿಂದ 15 ಕಿಮೀ ದೂರದ ಹೆಬ್ಬಾಳದಲ್ಲಿ ಹುಲಿ ಸಾವನ್ನಪ್ಪಿದೆ.
ಹುಲಿಗಳ ಕಾದಾಟದಿಂದಾಗಿ ಗಾಯಗೊಂಡು ಆಹಾರ ಸೇವಿಸಲಾಗದೆ ಸತ್ತಿರಬಹುದು ಎಂದು ವೈದ್ಯರು ಶಂಕಿಸಿದ್ದು ಹೊಟ್ಟೆಯಲ್ಲಿ ಆಹಾರ ಕಂಡುಬಾರದೇ ಇರುವುದು ಶಂಕೆಯನ್ನು ಪುಷ್ಟಿಗೊಳಿಸಿದೆ. ಬಂಡೀಪುರ ಹುಲಿ ಸಂರಕ್ಷಣಾ ಕೇಂದ್ರದಿಂದ 4 ಕಿಮೀ ದೂರದಲ್ಲಿ ಹುಲಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದ್ದು ಕೊಳೆತ ಸ್ಥಿತಿಯಲ್ಲಿ ಹುಲಿಯ ಶವ ಪತ್ತೆಯಾಗಿದೆ. ಕಳೆದ ವಾರವೂ ಹುಲಿ ಸಾವನ್ನಪ್ಪಿತ್ತು. ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ಕಳೆದ ಕೆಲವು ಸಮಯಗಳಿಂದ ಹುಲಿಗಳು ಸಾವನ್ನಪ್ಪುತ್ತಿರುವುದಕ್ಕೆ ಪರಿಸರ ಪ್ರೇಮಿಗಳು ಅನುಮಾನ ವ್ಯಕ್ತಪಡಿಸುತ್ತಾರೆ.
ಅರಣ್ಯ ಇಲಾಖೆಯ ಸಿಬಂದಿಗಳು ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಡಿಸಿಎಫ್ ಡಾ.ಕೆ.ಸಿ.ಪ್ರಶಾಂತ್ ಕುಮಾರ್, ವಾರ್ಡನ್ ಕೃತಿಕಾ ಆಲನಹಳ್ಳಿ, ಆರ್ ಎಫ್ ಒ ಮಧು, ಪಶುವೈದ್ಯ ಡಾ.ಡಿ.ಎನ್.ನಾಗರಾಜು ಹಾಗೂ ಇನ್ನಿತರರು ಇದ್ದರು. ಹುಲಿಗಳ ಸಾವಿಗೆ ನಿಖರ ಕಾರಣಗಳೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…