ಮಡಿಕೇರಿ/ಮೈಸೂರು: ಮೈಸೂರು ಜಿಲ್ಲೆಯ ಎಚ್ ಡಿ ಕೋಟೆಯಲ್ಲಿ ಸುಮಾರು 10 ವರ್ಷದ ಹೆಣ್ಣು ಹುಲಿಯೊಂದು ಸಾವನ್ನಪ್ಪಿರುವುದು ಸೋಮವಾರ ಬೆಳಕಿಗೆ ಬಂದಿದೆ. ಎರಡು ಹುಲಿಗಳ ನಡುವೆ ಕಾದಾಟವಾಗಿ ಗಾಯವಾಗಿ ಹುಲಿ ಸತ್ತಿರಬೇಕೆಂದು ಈಗ ಶಂಕಿಸಲಾಗಿದೆ. ಎಚ್ ಡಿ ಕೋಟೆಯಿಂದ 15 ಕಿಮೀ ದೂರದ ಹೆಬ್ಬಾಳದಲ್ಲಿ ಹುಲಿ ಸಾವನ್ನಪ್ಪಿದೆ.
ಹುಲಿಗಳ ಕಾದಾಟದಿಂದಾಗಿ ಗಾಯಗೊಂಡು ಆಹಾರ ಸೇವಿಸಲಾಗದೆ ಸತ್ತಿರಬಹುದು ಎಂದು ವೈದ್ಯರು ಶಂಕಿಸಿದ್ದು ಹೊಟ್ಟೆಯಲ್ಲಿ ಆಹಾರ ಕಂಡುಬಾರದೇ ಇರುವುದು ಶಂಕೆಯನ್ನು ಪುಷ್ಟಿಗೊಳಿಸಿದೆ. ಬಂಡೀಪುರ ಹುಲಿ ಸಂರಕ್ಷಣಾ ಕೇಂದ್ರದಿಂದ 4 ಕಿಮೀ ದೂರದಲ್ಲಿ ಹುಲಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದ್ದು ಕೊಳೆತ ಸ್ಥಿತಿಯಲ್ಲಿ ಹುಲಿಯ ಶವ ಪತ್ತೆಯಾಗಿದೆ. ಕಳೆದ ವಾರವೂ ಹುಲಿ ಸಾವನ್ನಪ್ಪಿತ್ತು. ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ಕಳೆದ ಕೆಲವು ಸಮಯಗಳಿಂದ ಹುಲಿಗಳು ಸಾವನ್ನಪ್ಪುತ್ತಿರುವುದಕ್ಕೆ ಪರಿಸರ ಪ್ರೇಮಿಗಳು ಅನುಮಾನ ವ್ಯಕ್ತಪಡಿಸುತ್ತಾರೆ.
ಅರಣ್ಯ ಇಲಾಖೆಯ ಸಿಬಂದಿಗಳು ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಡಿಸಿಎಫ್ ಡಾ.ಕೆ.ಸಿ.ಪ್ರಶಾಂತ್ ಕುಮಾರ್, ವಾರ್ಡನ್ ಕೃತಿಕಾ ಆಲನಹಳ್ಳಿ, ಆರ್ ಎಫ್ ಒ ಮಧು, ಪಶುವೈದ್ಯ ಡಾ.ಡಿ.ಎನ್.ನಾಗರಾಜು ಹಾಗೂ ಇನ್ನಿತರರು ಇದ್ದರು. ಹುಲಿಗಳ ಸಾವಿಗೆ ನಿಖರ ಕಾರಣಗಳೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…
ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…
ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…