ಮಡಿಕೇರಿ/ಮೈಸೂರು: ಮೈಸೂರು ಜಿಲ್ಲೆಯ ಎಚ್ ಡಿ ಕೋಟೆಯಲ್ಲಿ ಸುಮಾರು 10 ವರ್ಷದ ಹೆಣ್ಣು ಹುಲಿಯೊಂದು ಸಾವನ್ನಪ್ಪಿರುವುದು ಸೋಮವಾರ ಬೆಳಕಿಗೆ ಬಂದಿದೆ. ಎರಡು ಹುಲಿಗಳ ನಡುವೆ ಕಾದಾಟವಾಗಿ ಗಾಯವಾಗಿ ಹುಲಿ ಸತ್ತಿರಬೇಕೆಂದು ಈಗ ಶಂಕಿಸಲಾಗಿದೆ. ಎಚ್ ಡಿ ಕೋಟೆಯಿಂದ 15 ಕಿಮೀ ದೂರದ ಹೆಬ್ಬಾಳದಲ್ಲಿ ಹುಲಿ ಸಾವನ್ನಪ್ಪಿದೆ.
ಹುಲಿಗಳ ಕಾದಾಟದಿಂದಾಗಿ ಗಾಯಗೊಂಡು ಆಹಾರ ಸೇವಿಸಲಾಗದೆ ಸತ್ತಿರಬಹುದು ಎಂದು ವೈದ್ಯರು ಶಂಕಿಸಿದ್ದು ಹೊಟ್ಟೆಯಲ್ಲಿ ಆಹಾರ ಕಂಡುಬಾರದೇ ಇರುವುದು ಶಂಕೆಯನ್ನು ಪುಷ್ಟಿಗೊಳಿಸಿದೆ. ಬಂಡೀಪುರ ಹುಲಿ ಸಂರಕ್ಷಣಾ ಕೇಂದ್ರದಿಂದ 4 ಕಿಮೀ ದೂರದಲ್ಲಿ ಹುಲಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದ್ದು ಕೊಳೆತ ಸ್ಥಿತಿಯಲ್ಲಿ ಹುಲಿಯ ಶವ ಪತ್ತೆಯಾಗಿದೆ. ಕಳೆದ ವಾರವೂ ಹುಲಿ ಸಾವನ್ನಪ್ಪಿತ್ತು. ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ಕಳೆದ ಕೆಲವು ಸಮಯಗಳಿಂದ ಹುಲಿಗಳು ಸಾವನ್ನಪ್ಪುತ್ತಿರುವುದಕ್ಕೆ ಪರಿಸರ ಪ್ರೇಮಿಗಳು ಅನುಮಾನ ವ್ಯಕ್ತಪಡಿಸುತ್ತಾರೆ.
ಅರಣ್ಯ ಇಲಾಖೆಯ ಸಿಬಂದಿಗಳು ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಡಿಸಿಎಫ್ ಡಾ.ಕೆ.ಸಿ.ಪ್ರಶಾಂತ್ ಕುಮಾರ್, ವಾರ್ಡನ್ ಕೃತಿಕಾ ಆಲನಹಳ್ಳಿ, ಆರ್ ಎಫ್ ಒ ಮಧು, ಪಶುವೈದ್ಯ ಡಾ.ಡಿ.ಎನ್.ನಾಗರಾಜು ಹಾಗೂ ಇನ್ನಿತರರು ಇದ್ದರು. ಹುಲಿಗಳ ಸಾವಿಗೆ ನಿಖರ ಕಾರಣಗಳೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…