Advertisement
ಸುದ್ದಿಗಳು

ಎಚ್.ಭೀಮರಾವ್ ವಾಷ್ಠರ್ ನಿರ್ದೇಶನದ “ಪರಿವರ್ತನೆ” ಚಲನಚಿತ್ರ ಬಿಡುಗಡೆ

Share
ಸುಳ್ಯ: ವಿಜಯಪುರ , ಮಹಾರಾಷ್ಟ್ರದ   ಪಂಡರಪುರ  ಮತ್ತು ಕುಷ್ಟಗಿಯಲ್ಲಿ  ಚಿತ್ರೀಕರಣಗೊಂಡ  ಪರಿವರ್ತನೆ ಚಲನಚಿತ್ರ ಬಿಡುಗಡೆ ಸಮಾರಂಭವು ಸುಳ್ಯದ  ಚರ್ಚ್  ಶಾಲೆಯ ಸಭಾಂಗಣದಲ್ಲಿ  ನಡೆಯಿತು.
ಸುಳ್ಯದ ಸಾಹಿತಿ ಮತ್ತು ಜ್ಯೋತಿಷಿಯಾದ ಎಚ್.ಭೀಮರಾವ್ ವಾಷ್ಠರ್ ಅವರು  ಕತೆ ,ಚಿತ್ರಕತೆ , ಸಂಭಾಷಣೆ , ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದ ಈ ಚಲನ ಚಿತ್ರವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು  ಚಿತ್ರದ ಪಣಿಕ್ಕರ್ ಪಾತ್ರದ ಖ್ಯಾತ ಚಿತ್ರನಟ ಬಾಲಕೃಷ್ಣ  ಮೇಸ್ಟ್ರು ಸಮಾರಂಭದ ಅಧ್ಯಕ್ಷತೆ  ವಹಿಸಿ ಬಿಡುಗಡೆ ಮಾಡಿದರು.
ಭಾವನಾ ಮೀಡಿಯಾ ಅರ್ಪಿಸುವ  9 ನೇ ಕಾಣಿಕೆಯ  ಈ  ಪರಿವರ್ತನೆ ಚಿತ್ರ ಬಿಡುಗಡೆ ಸಮಾರಂಭದ ಉದ್ಘಾಟನೆಯನ್ನು  ಚರ್ಚ್ ಶಿಕ್ಷಣ ಸಂಸ್ಥೆಗಳ  ಸಂಚಾಲಕರಾದ ರೇ|ಫಾ |ವಿಕ್ಟರ್  ಡಿಸೋಜಾ  ಅವರು ನೆರವೇರಿಸಿದರು. ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸಿದ ಸಂತ ಜೋಷೆಫ್  ಶಾಲೆಯ 5 ನೇ ತರಗತಿಯ  ವಿದ್ಯಾರ್ಥಿ ಉಜ್ವಲ್ ವಾಷ್ಠರ್ ರಿಗೆ ಟ್ವಿಂಕಲ್ ಸ್ಟಾರ್   ಬಿರುದು ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಧರ್ಮಗುರುಗಳಾದ ವಿಕ್ಟರ್ ಡಿಸೋಜಾ ಮತ್ತು ಚಿತ್ರನಟ ಬಾಲಕೃಷ್ಣ ಅಡೂರ್ ಅವರಿಗೆ ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ಶಿಕ್ಷಣ ಸಂಯೋಜಕರಾದ ಚಂದ್ರಶೇಖರ್ , ವಿಷ್ಣುವರ್ಧನ್ ಸಂಘದ ಅಧ್ಯಕ್ಷ ಹರಿಶ್ಚಂದ್ರ ಪಂಡಿತ್ , ಯೋಗೇಶ್ವರಾನಂದ  ಸ್ವಾಮಿ , ಭ್ರಷ್ಟಾಚಾರ ಮತ್ತು ಅಪರಾಧ ನಿಗ್ರಹ   ಪತ್ತೆದಳದ ರಾಜ್ಯಅಧ್ಯಕ್ಷರಾದ  ಪ್ರಶಾಂತ್ ರೈ ಮರವಂಜ , ಸುಜಯ ಕೃಷ್ಣಪ್ಪ ,ಶಿಕ್ಷಕಿ ಪ್ರಭಾ, ಮುಖ್ಯೋಪಾಧ್ಯಾರಾದ  ಸಿ|ಬಿನೋಮಾ  ಭಾಗವಹಿಸಿದ್ದರು.
ಚಿತ್ರನಟರಾದ ಜೂನಿಯರ್ ಪ್ರಭಾಕರ್ , ಭಾಸ್ಕರ್  ಮಂಜೇಶ್ವರ್ , ನಟರಾಜ್ ಮಾಸ್ಟರ್ , ಗುರುಪ್ರಸಾದ್ ರೈ , ತುಳಸಿ , ಜಯಂತಿ ಸುವರ್ಣ ,ಚೇತನ್ ಗಬ್ಬಲಡ್ಕ , ವಿಜೇತ್ ಅಡ್ಯಡ್ಕ  ಪ್ರವೀಣಾ  ಪ್ರಶಾಂತ್ ರೈ ಇನ್ನಿತರರು ಉಪಸ್ಥಿತರಿದ್ದರು. ಎಚ್. ಭೀಮರಾವ್ ವಾಷ್ಠರ್ ಪ್ರಾಸ್ತಾವಿಕ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು. ವಿನಯ್ ಮತ್ತು ಅನಿಲ್  ಡಿಸೋಜಾ ಸಹಕರಿಸಿದರು. ನಂತರ ಒಂದೂವರೆ  ಗಂಟೆಯ  ಪರಿವರ್ತನೆ ಚಿತ್ರವನ್ನು ಪ್ರದರ್ಶನ ಮಾಡಲಾಯಿತು. ಸುಮಾರು 500 ಕ್ಕೂ ಹೆಚ್ಚು ಮಕ್ಕಳು ಚಿತ್ರ ವೀಕ್ಷಿಸಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 hour ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

10 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

11 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

20 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago