Advertisement
ಸುದ್ದಿಗಳು

ಎಚ್.ಭೀಮರಾವ್ ವಾಷ್ಠರ್ ನಿರ್ದೇಶನದ “ಪರಿವರ್ತನೆ” ಚಲನಚಿತ್ರ ಬಿಡುಗಡೆ

Share
ಸುಳ್ಯ: ವಿಜಯಪುರ , ಮಹಾರಾಷ್ಟ್ರದ   ಪಂಡರಪುರ  ಮತ್ತು ಕುಷ್ಟಗಿಯಲ್ಲಿ  ಚಿತ್ರೀಕರಣಗೊಂಡ  ಪರಿವರ್ತನೆ ಚಲನಚಿತ್ರ ಬಿಡುಗಡೆ ಸಮಾರಂಭವು ಸುಳ್ಯದ  ಚರ್ಚ್  ಶಾಲೆಯ ಸಭಾಂಗಣದಲ್ಲಿ  ನಡೆಯಿತು.
ಸುಳ್ಯದ ಸಾಹಿತಿ ಮತ್ತು ಜ್ಯೋತಿಷಿಯಾದ ಎಚ್.ಭೀಮರಾವ್ ವಾಷ್ಠರ್ ಅವರು  ಕತೆ ,ಚಿತ್ರಕತೆ , ಸಂಭಾಷಣೆ , ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದ ಈ ಚಲನ ಚಿತ್ರವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು  ಚಿತ್ರದ ಪಣಿಕ್ಕರ್ ಪಾತ್ರದ ಖ್ಯಾತ ಚಿತ್ರನಟ ಬಾಲಕೃಷ್ಣ  ಮೇಸ್ಟ್ರು ಸಮಾರಂಭದ ಅಧ್ಯಕ್ಷತೆ  ವಹಿಸಿ ಬಿಡುಗಡೆ ಮಾಡಿದರು.
ಭಾವನಾ ಮೀಡಿಯಾ ಅರ್ಪಿಸುವ  9 ನೇ ಕಾಣಿಕೆಯ  ಈ  ಪರಿವರ್ತನೆ ಚಿತ್ರ ಬಿಡುಗಡೆ ಸಮಾರಂಭದ ಉದ್ಘಾಟನೆಯನ್ನು  ಚರ್ಚ್ ಶಿಕ್ಷಣ ಸಂಸ್ಥೆಗಳ  ಸಂಚಾಲಕರಾದ ರೇ|ಫಾ |ವಿಕ್ಟರ್  ಡಿಸೋಜಾ  ಅವರು ನೆರವೇರಿಸಿದರು. ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸಿದ ಸಂತ ಜೋಷೆಫ್  ಶಾಲೆಯ 5 ನೇ ತರಗತಿಯ  ವಿದ್ಯಾರ್ಥಿ ಉಜ್ವಲ್ ವಾಷ್ಠರ್ ರಿಗೆ ಟ್ವಿಂಕಲ್ ಸ್ಟಾರ್   ಬಿರುದು ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಧರ್ಮಗುರುಗಳಾದ ವಿಕ್ಟರ್ ಡಿಸೋಜಾ ಮತ್ತು ಚಿತ್ರನಟ ಬಾಲಕೃಷ್ಣ ಅಡೂರ್ ಅವರಿಗೆ ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ಶಿಕ್ಷಣ ಸಂಯೋಜಕರಾದ ಚಂದ್ರಶೇಖರ್ , ವಿಷ್ಣುವರ್ಧನ್ ಸಂಘದ ಅಧ್ಯಕ್ಷ ಹರಿಶ್ಚಂದ್ರ ಪಂಡಿತ್ , ಯೋಗೇಶ್ವರಾನಂದ  ಸ್ವಾಮಿ , ಭ್ರಷ್ಟಾಚಾರ ಮತ್ತು ಅಪರಾಧ ನಿಗ್ರಹ   ಪತ್ತೆದಳದ ರಾಜ್ಯಅಧ್ಯಕ್ಷರಾದ  ಪ್ರಶಾಂತ್ ರೈ ಮರವಂಜ , ಸುಜಯ ಕೃಷ್ಣಪ್ಪ ,ಶಿಕ್ಷಕಿ ಪ್ರಭಾ, ಮುಖ್ಯೋಪಾಧ್ಯಾರಾದ  ಸಿ|ಬಿನೋಮಾ  ಭಾಗವಹಿಸಿದ್ದರು.
ಚಿತ್ರನಟರಾದ ಜೂನಿಯರ್ ಪ್ರಭಾಕರ್ , ಭಾಸ್ಕರ್  ಮಂಜೇಶ್ವರ್ , ನಟರಾಜ್ ಮಾಸ್ಟರ್ , ಗುರುಪ್ರಸಾದ್ ರೈ , ತುಳಸಿ , ಜಯಂತಿ ಸುವರ್ಣ ,ಚೇತನ್ ಗಬ್ಬಲಡ್ಕ , ವಿಜೇತ್ ಅಡ್ಯಡ್ಕ  ಪ್ರವೀಣಾ  ಪ್ರಶಾಂತ್ ರೈ ಇನ್ನಿತರರು ಉಪಸ್ಥಿತರಿದ್ದರು. ಎಚ್. ಭೀಮರಾವ್ ವಾಷ್ಠರ್ ಪ್ರಾಸ್ತಾವಿಕ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು. ವಿನಯ್ ಮತ್ತು ಅನಿಲ್  ಡಿಸೋಜಾ ಸಹಕರಿಸಿದರು. ನಂತರ ಒಂದೂವರೆ  ಗಂಟೆಯ  ಪರಿವರ್ತನೆ ಚಿತ್ರವನ್ನು ಪ್ರದರ್ಶನ ಮಾಡಲಾಯಿತು. ಸುಮಾರು 500 ಕ್ಕೂ ಹೆಚ್ಚು ಮಕ್ಕಳು ಚಿತ್ರ ವೀಕ್ಷಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

23 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago