ಎಡಮಂಗಲ 94ಸಿ ಅರ್ಜಿ ಮರುಪರಿಶೀಲನಾ ಸಭೆ

June 22, 2019
11:01 AM

ನಿಂತಿಕಲ್ಲು: ಎಡಮಂಗಲ ಗ್ರಾಮ ಪಂಚಾಯತ್, ಪಂಜ ವಲಯಾರಣ್ಯ ಇಲಾಖೆ ಹಾಗು ಎಡಮಂಗಲ ಅರಣ್ಯ ಸಮಿತಿಯ ಜಂಟಿ ಆಶ್ರಯದಲ್ಲಿ 94ಸಿ ಅರ್ಜಿ ಮರುಪರಿಶೀಲನಾ ಸಭೆ ಸೋಮವಾರದಂದು ಎಡಮಂಗಲದ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಸುಮಾರು 56 ಫಲಾನುಭವಿಗಳ ಅರ್ಜಿಗಳನ್ನು ಮರುಪರಿಶೀಲನೆ ನಡೆಸಲಾಯಿತು. ಅರ್ಜಿಗಳನ್ನು ಮರುಪರಿಶೀಲಿಸಿದ ನಂತರ ಸವುಗಳನ್ನು ಸಮಾಜಕಲ್ಯಾಣ ಅಧಿಕಾರಿಗಳ ಮೂಲಕ ಸಹಾಯಕ ಆಯುಕ್ತರಿಗೆ ಕಳುಹಿಸಿಕೊಡುವ ಕುರಿತು ನಿರ್ಣಯ ಕೈಗೊಳ್ಳಲಾಯಿತು. ಹಿಂದೆ ಕಳುಹಿಸಿದ ಅರ್ಜಿಗಳನ್ನು ಮರುವಿಲೇವಾರಿ ಮಾಡಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಅರಣ್ಯ ಸಮಿತಿಯ ಅಧ್ಯಕ್ಷ ವಿಶ್ವನಾಥ ಗೌಡ ವಹಿಸಿದರು. ವೇದಿಕೆಯಲ್ಲಿ ಎಡಮಂಗಲ ಗ್ರಾಮ ಪಂಚಾಯತ್ ಅಧ್ಯಕ್ಷ ಸುಂದರ ಗೌಡ ದೋಳ್ತಿಲ, ಎಡಮಂಗಲ ವ್ಯಾಪ್ತಿಯ ಪಂಜ ಉಪ ವಲಯ ಅರಣ್ಯಾಧಿಕಾರಿ ರವಿಪ್ರಕಾಶ್, ಎಡಮಂಗಲ ಅರಣ್ಯ ಗಸ್ತು ರಕ್ಷಕ ಮನೋಹರ ಪಿ.ವಿ, ಕಂದಾಯ ಇಲಾಖೆಯ ಎಡಮಂಗಲ ಗ್ರಾಮ ಸಹಾಯಕ ನಾರಾಯಣ ನಾಯ್ಕ ಉಪಸ್ಥಿತರಿದ್ದರು. ಪಿಡಿಒ ಸರಿತಾ ಓಲ್ಗ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-06-2025 | ಕರಾವಳಿ ಜಿಲ್ಲೆಯಲ್ಲಿ ಮಳೆ ಏನಾಯ್ತು..? | ಜುಲೈ 6 ನಂತರ ಮಳೆ ಕಡಿಮೆ..?
June 28, 2025
2:17 PM
by: ಸಾಯಿಶೇಖರ್ ಕರಿಕಳ
ಮುಂಗಾರು ಮಳೆ ಸುದ್ದಿ | ಕೇರಳದಲ್ಲಿ ತೀವ್ರಗೊಳ್ಳಲಿದೆ ಮಳೆ | ದೆಹಲಿಯಲ್ಲೂ ಮಳೆ ಎಚ್ಚರಿಕೆ | ಹಿಮಾಚಲದಲ್ಲಿ 20 ಕ್ಕೂ ಹೆಚ್ಚು ಜೀವಹಾನಿ |
June 28, 2025
7:14 AM
by: The Rural Mirror ಸುದ್ದಿಜಾಲ
ಆಷಾಢ ಶುಕ್ರವಾರ, ಈ ಸ್ಥಳದಲ್ಲಿ ಈ ರಾಶಿಯವರು ಯಾವುದಾದರೂ ದೇವಿಯ ದೇವಸ್ಥಾನದಲ್ಲಿ ಹಿಟ್ಟಿನ ದೀಪ ಹಚ್ಚಿಡಿ..
June 28, 2025
6:37 AM
by: ದ ರೂರಲ್ ಮಿರರ್.ಕಾಂ
ಪರಿಸರ ವಿಚಾರದಲ್ಲಿ ಸರ್ಕಾರದ ಬೇಜವಾಬ್ದಾರಿ..! ಇಲ್ಲಿದೆ ಅಭಿಪ್ರಾಯ..
June 27, 2025
11:35 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group