ಎಡಮಂಗಲ 94ಸಿ ಅರ್ಜಿ ಮರುಪರಿಶೀಲನಾ ಸಭೆ

June 22, 2019
11:01 AM

ನಿಂತಿಕಲ್ಲು: ಎಡಮಂಗಲ ಗ್ರಾಮ ಪಂಚಾಯತ್, ಪಂಜ ವಲಯಾರಣ್ಯ ಇಲಾಖೆ ಹಾಗು ಎಡಮಂಗಲ ಅರಣ್ಯ ಸಮಿತಿಯ ಜಂಟಿ ಆಶ್ರಯದಲ್ಲಿ 94ಸಿ ಅರ್ಜಿ ಮರುಪರಿಶೀಲನಾ ಸಭೆ ಸೋಮವಾರದಂದು ಎಡಮಂಗಲದ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಸುಮಾರು 56 ಫಲಾನುಭವಿಗಳ ಅರ್ಜಿಗಳನ್ನು ಮರುಪರಿಶೀಲನೆ ನಡೆಸಲಾಯಿತು. ಅರ್ಜಿಗಳನ್ನು ಮರುಪರಿಶೀಲಿಸಿದ ನಂತರ ಸವುಗಳನ್ನು ಸಮಾಜಕಲ್ಯಾಣ ಅಧಿಕಾರಿಗಳ ಮೂಲಕ ಸಹಾಯಕ ಆಯುಕ್ತರಿಗೆ ಕಳುಹಿಸಿಕೊಡುವ ಕುರಿತು ನಿರ್ಣಯ ಕೈಗೊಳ್ಳಲಾಯಿತು. ಹಿಂದೆ ಕಳುಹಿಸಿದ ಅರ್ಜಿಗಳನ್ನು ಮರುವಿಲೇವಾರಿ ಮಾಡಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಅರಣ್ಯ ಸಮಿತಿಯ ಅಧ್ಯಕ್ಷ ವಿಶ್ವನಾಥ ಗೌಡ ವಹಿಸಿದರು. ವೇದಿಕೆಯಲ್ಲಿ ಎಡಮಂಗಲ ಗ್ರಾಮ ಪಂಚಾಯತ್ ಅಧ್ಯಕ್ಷ ಸುಂದರ ಗೌಡ ದೋಳ್ತಿಲ, ಎಡಮಂಗಲ ವ್ಯಾಪ್ತಿಯ ಪಂಜ ಉಪ ವಲಯ ಅರಣ್ಯಾಧಿಕಾರಿ ರವಿಪ್ರಕಾಶ್, ಎಡಮಂಗಲ ಅರಣ್ಯ ಗಸ್ತು ರಕ್ಷಕ ಮನೋಹರ ಪಿ.ವಿ, ಕಂದಾಯ ಇಲಾಖೆಯ ಎಡಮಂಗಲ ಗ್ರಾಮ ಸಹಾಯಕ ನಾರಾಯಣ ನಾಯ್ಕ ಉಪಸ್ಥಿತರಿದ್ದರು. ಪಿಡಿಒ ಸರಿತಾ ಓಲ್ಗ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror