ನಿಂತಿಕಲ್ಲು: ಎಡಮಂಗಲ ಗ್ರಾಮ ಪಂಚಾಯತ್, ಪಂಜ ವಲಯಾರಣ್ಯ ಇಲಾಖೆ ಹಾಗು ಎಡಮಂಗಲ ಅರಣ್ಯ ಸಮಿತಿಯ ಜಂಟಿ ಆಶ್ರಯದಲ್ಲಿ 94ಸಿ ಅರ್ಜಿ ಮರುಪರಿಶೀಲನಾ ಸಭೆ ಸೋಮವಾರದಂದು ಎಡಮಂಗಲದ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಸುಮಾರು 56 ಫಲಾನುಭವಿಗಳ ಅರ್ಜಿಗಳನ್ನು ಮರುಪರಿಶೀಲನೆ ನಡೆಸಲಾಯಿತು. ಅರ್ಜಿಗಳನ್ನು ಮರುಪರಿಶೀಲಿಸಿದ ನಂತರ ಸವುಗಳನ್ನು ಸಮಾಜಕಲ್ಯಾಣ ಅಧಿಕಾರಿಗಳ ಮೂಲಕ ಸಹಾಯಕ ಆಯುಕ್ತರಿಗೆ ಕಳುಹಿಸಿಕೊಡುವ ಕುರಿತು ನಿರ್ಣಯ ಕೈಗೊಳ್ಳಲಾಯಿತು. ಹಿಂದೆ ಕಳುಹಿಸಿದ ಅರ್ಜಿಗಳನ್ನು ಮರುವಿಲೇವಾರಿ ಮಾಡಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಅರಣ್ಯ ಸಮಿತಿಯ ಅಧ್ಯಕ್ಷ ವಿಶ್ವನಾಥ ಗೌಡ ವಹಿಸಿದರು. ವೇದಿಕೆಯಲ್ಲಿ ಎಡಮಂಗಲ ಗ್ರಾಮ ಪಂಚಾಯತ್ ಅಧ್ಯಕ್ಷ ಸುಂದರ ಗೌಡ ದೋಳ್ತಿಲ, ಎಡಮಂಗಲ ವ್ಯಾಪ್ತಿಯ ಪಂಜ ಉಪ ವಲಯ ಅರಣ್ಯಾಧಿಕಾರಿ ರವಿಪ್ರಕಾಶ್, ಎಡಮಂಗಲ ಅರಣ್ಯ ಗಸ್ತು ರಕ್ಷಕ ಮನೋಹರ ಪಿ.ವಿ, ಕಂದಾಯ ಇಲಾಖೆಯ ಎಡಮಂಗಲ ಗ್ರಾಮ ಸಹಾಯಕ ನಾರಾಯಣ ನಾಯ್ಕ ಉಪಸ್ಥಿತರಿದ್ದರು. ಪಿಡಿಒ ಸರಿತಾ ಓಲ್ಗ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.
‘ಪನಸೋಪಾಖ್ಯಾನ’ ಪ್ರಸಂಗವು ತಾಳಮದ್ದಳೆ ರೂಪದಲ್ಲಿ ಪ್ರಸ್ತುತವಾಯಿತು. ಇದು ಕಾಲ್ಪನಿಕ ಕಥಾಭಾಗವನ್ನು ಹೊಂದಿರುವ ಪ್ರಸಂಗ.…
ಜೂನ್ 18 ರಿಂದ ಮುಂಗಾರು ಮತ್ತೆ ದುರ್ಬಲಗೊಂಡು ಮಳೆ ಕಡಿಮೆಯಾಗುವ ಸೂಚನೆಗಳಿವೆ.
ತಾಂಬೂಲ ಸೇವನೆಗೆ ಅದರದ್ದೇ ಆದ ಇತಿಹಾಸ ಇದೆ. ಜಗತ್ತಿನ ಅಭಿವೃದ್ಧಿ ಹೊಂದಿದ ಮತ್ತು…
ಮಕ್ಕಳಲ್ಲಿ ಬೌದ್ಧಿಕ ಸಾಮರ್ಥ್ಯ ಗಣಿತ ಹಾಗೂ ಭಾಷಾ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಕಲಿಕಾ ಮಾದರಿ…
ಅಡಿಕೆ ಬೆಳೆಗಾರರಿಗೆ ಜೂನ್ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…