ನಿಂತಿಕಲ್ಲು: ಎಡಮಂಗಲ ಗ್ರಾಮ ಪಂಚಾಯತ್, ಪಂಜ ವಲಯಾರಣ್ಯ ಇಲಾಖೆ ಹಾಗು ಎಡಮಂಗಲ ಅರಣ್ಯ ಸಮಿತಿಯ ಜಂಟಿ ಆಶ್ರಯದಲ್ಲಿ 94ಸಿ ಅರ್ಜಿ ಮರುಪರಿಶೀಲನಾ ಸಭೆ ಸೋಮವಾರದಂದು ಎಡಮಂಗಲದ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಸುಮಾರು 56 ಫಲಾನುಭವಿಗಳ ಅರ್ಜಿಗಳನ್ನು ಮರುಪರಿಶೀಲನೆ ನಡೆಸಲಾಯಿತು. ಅರ್ಜಿಗಳನ್ನು ಮರುಪರಿಶೀಲಿಸಿದ ನಂತರ ಸವುಗಳನ್ನು ಸಮಾಜಕಲ್ಯಾಣ ಅಧಿಕಾರಿಗಳ ಮೂಲಕ ಸಹಾಯಕ ಆಯುಕ್ತರಿಗೆ ಕಳುಹಿಸಿಕೊಡುವ ಕುರಿತು ನಿರ್ಣಯ ಕೈಗೊಳ್ಳಲಾಯಿತು. ಹಿಂದೆ ಕಳುಹಿಸಿದ ಅರ್ಜಿಗಳನ್ನು ಮರುವಿಲೇವಾರಿ ಮಾಡಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಅರಣ್ಯ ಸಮಿತಿಯ ಅಧ್ಯಕ್ಷ ವಿಶ್ವನಾಥ ಗೌಡ ವಹಿಸಿದರು. ವೇದಿಕೆಯಲ್ಲಿ ಎಡಮಂಗಲ ಗ್ರಾಮ ಪಂಚಾಯತ್ ಅಧ್ಯಕ್ಷ ಸುಂದರ ಗೌಡ ದೋಳ್ತಿಲ, ಎಡಮಂಗಲ ವ್ಯಾಪ್ತಿಯ ಪಂಜ ಉಪ ವಲಯ ಅರಣ್ಯಾಧಿಕಾರಿ ರವಿಪ್ರಕಾಶ್, ಎಡಮಂಗಲ ಅರಣ್ಯ ಗಸ್ತು ರಕ್ಷಕ ಮನೋಹರ ಪಿ.ವಿ, ಕಂದಾಯ ಇಲಾಖೆಯ ಎಡಮಂಗಲ ಗ್ರಾಮ ಸಹಾಯಕ ನಾರಾಯಣ ನಾಯ್ಕ ಉಪಸ್ಥಿತರಿದ್ದರು. ಪಿಡಿಒ ಸರಿತಾ ಓಲ್ಗ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…