ನಿಂತಿಕಲ್ಲು: ಎಡಮಂಗಲ ಗ್ರಾಮ ಪಂಚಾಯತ್, ಪಂಜ ವಲಯಾರಣ್ಯ ಇಲಾಖೆ ಹಾಗು ಎಡಮಂಗಲ ಅರಣ್ಯ ಸಮಿತಿಯ ಜಂಟಿ ಆಶ್ರಯದಲ್ಲಿ 94ಸಿ ಅರ್ಜಿ ಮರುಪರಿಶೀಲನಾ ಸಭೆ ಸೋಮವಾರದಂದು ಎಡಮಂಗಲದ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಸುಮಾರು 56 ಫಲಾನುಭವಿಗಳ ಅರ್ಜಿಗಳನ್ನು ಮರುಪರಿಶೀಲನೆ ನಡೆಸಲಾಯಿತು. ಅರ್ಜಿಗಳನ್ನು ಮರುಪರಿಶೀಲಿಸಿದ ನಂತರ ಸವುಗಳನ್ನು ಸಮಾಜಕಲ್ಯಾಣ ಅಧಿಕಾರಿಗಳ ಮೂಲಕ ಸಹಾಯಕ ಆಯುಕ್ತರಿಗೆ ಕಳುಹಿಸಿಕೊಡುವ ಕುರಿತು ನಿರ್ಣಯ ಕೈಗೊಳ್ಳಲಾಯಿತು. ಹಿಂದೆ ಕಳುಹಿಸಿದ ಅರ್ಜಿಗಳನ್ನು ಮರುವಿಲೇವಾರಿ ಮಾಡಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಅರಣ್ಯ ಸಮಿತಿಯ ಅಧ್ಯಕ್ಷ ವಿಶ್ವನಾಥ ಗೌಡ ವಹಿಸಿದರು. ವೇದಿಕೆಯಲ್ಲಿ ಎಡಮಂಗಲ ಗ್ರಾಮ ಪಂಚಾಯತ್ ಅಧ್ಯಕ್ಷ ಸುಂದರ ಗೌಡ ದೋಳ್ತಿಲ, ಎಡಮಂಗಲ ವ್ಯಾಪ್ತಿಯ ಪಂಜ ಉಪ ವಲಯ ಅರಣ್ಯಾಧಿಕಾರಿ ರವಿಪ್ರಕಾಶ್, ಎಡಮಂಗಲ ಅರಣ್ಯ ಗಸ್ತು ರಕ್ಷಕ ಮನೋಹರ ಪಿ.ವಿ, ಕಂದಾಯ ಇಲಾಖೆಯ ಎಡಮಂಗಲ ಗ್ರಾಮ ಸಹಾಯಕ ನಾರಾಯಣ ನಾಯ್ಕ ಉಪಸ್ಥಿತರಿದ್ದರು. ಪಿಡಿಒ ಸರಿತಾ ಓಲ್ಗ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…