ನಿಂತಿಕಲ್ಲು: ಎಡಮಂಗಲ ಗ್ರಾಮ ಪಂಚಾಯತ್, ಪಂಜ ವಲಯಾರಣ್ಯ ಇಲಾಖೆ ಹಾಗು ಎಡಮಂಗಲ ಅರಣ್ಯ ಸಮಿತಿಯ ಜಂಟಿ ಆಶ್ರಯದಲ್ಲಿ 94ಸಿ ಅರ್ಜಿ ಮರುಪರಿಶೀಲನಾ ಸಭೆ ಸೋಮವಾರದಂದು ಎಡಮಂಗಲದ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಸುಮಾರು 56 ಫಲಾನುಭವಿಗಳ ಅರ್ಜಿಗಳನ್ನು ಮರುಪರಿಶೀಲನೆ ನಡೆಸಲಾಯಿತು. ಅರ್ಜಿಗಳನ್ನು ಮರುಪರಿಶೀಲಿಸಿದ ನಂತರ ಸವುಗಳನ್ನು ಸಮಾಜಕಲ್ಯಾಣ ಅಧಿಕಾರಿಗಳ ಮೂಲಕ ಸಹಾಯಕ ಆಯುಕ್ತರಿಗೆ ಕಳುಹಿಸಿಕೊಡುವ ಕುರಿತು ನಿರ್ಣಯ ಕೈಗೊಳ್ಳಲಾಯಿತು. ಹಿಂದೆ ಕಳುಹಿಸಿದ ಅರ್ಜಿಗಳನ್ನು ಮರುವಿಲೇವಾರಿ ಮಾಡಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಅರಣ್ಯ ಸಮಿತಿಯ ಅಧ್ಯಕ್ಷ ವಿಶ್ವನಾಥ ಗೌಡ ವಹಿಸಿದರು. ವೇದಿಕೆಯಲ್ಲಿ ಎಡಮಂಗಲ ಗ್ರಾಮ ಪಂಚಾಯತ್ ಅಧ್ಯಕ್ಷ ಸುಂದರ ಗೌಡ ದೋಳ್ತಿಲ, ಎಡಮಂಗಲ ವ್ಯಾಪ್ತಿಯ ಪಂಜ ಉಪ ವಲಯ ಅರಣ್ಯಾಧಿಕಾರಿ ರವಿಪ್ರಕಾಶ್, ಎಡಮಂಗಲ ಅರಣ್ಯ ಗಸ್ತು ರಕ್ಷಕ ಮನೋಹರ ಪಿ.ವಿ, ಕಂದಾಯ ಇಲಾಖೆಯ ಎಡಮಂಗಲ ಗ್ರಾಮ ಸಹಾಯಕ ನಾರಾಯಣ ನಾಯ್ಕ ಉಪಸ್ಥಿತರಿದ್ದರು. ಪಿಡಿಒ ಸರಿತಾ ಓಲ್ಗ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…