ನಿಂತಿಕಲ್ಲು: ಎಡಮಂಗಲ ಗ್ರಾಮ ಪಂಚಾಯತ್, ಪಂಜ ವಲಯಾರಣ್ಯ ಇಲಾಖೆ ಹಾಗು ಎಡಮಂಗಲ ಅರಣ್ಯ ಸಮಿತಿಯ ಜಂಟಿ ಆಶ್ರಯದಲ್ಲಿ 94ಸಿ ಅರ್ಜಿ ಮರುಪರಿಶೀಲನಾ ಸಭೆ ಸೋಮವಾರದಂದು ಎಡಮಂಗಲದ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಸುಮಾರು 56 ಫಲಾನುಭವಿಗಳ ಅರ್ಜಿಗಳನ್ನು ಮರುಪರಿಶೀಲನೆ ನಡೆಸಲಾಯಿತು. ಅರ್ಜಿಗಳನ್ನು ಮರುಪರಿಶೀಲಿಸಿದ ನಂತರ ಸವುಗಳನ್ನು ಸಮಾಜಕಲ್ಯಾಣ ಅಧಿಕಾರಿಗಳ ಮೂಲಕ ಸಹಾಯಕ ಆಯುಕ್ತರಿಗೆ ಕಳುಹಿಸಿಕೊಡುವ ಕುರಿತು ನಿರ್ಣಯ ಕೈಗೊಳ್ಳಲಾಯಿತು. ಹಿಂದೆ ಕಳುಹಿಸಿದ ಅರ್ಜಿಗಳನ್ನು ಮರುವಿಲೇವಾರಿ ಮಾಡಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಅರಣ್ಯ ಸಮಿತಿಯ ಅಧ್ಯಕ್ಷ ವಿಶ್ವನಾಥ ಗೌಡ ವಹಿಸಿದರು. ವೇದಿಕೆಯಲ್ಲಿ ಎಡಮಂಗಲ ಗ್ರಾಮ ಪಂಚಾಯತ್ ಅಧ್ಯಕ್ಷ ಸುಂದರ ಗೌಡ ದೋಳ್ತಿಲ, ಎಡಮಂಗಲ ವ್ಯಾಪ್ತಿಯ ಪಂಜ ಉಪ ವಲಯ ಅರಣ್ಯಾಧಿಕಾರಿ ರವಿಪ್ರಕಾಶ್, ಎಡಮಂಗಲ ಅರಣ್ಯ ಗಸ್ತು ರಕ್ಷಕ ಮನೋಹರ ಪಿ.ವಿ, ಕಂದಾಯ ಇಲಾಖೆಯ ಎಡಮಂಗಲ ಗ್ರಾಮ ಸಹಾಯಕ ನಾರಾಯಣ ನಾಯ್ಕ ಉಪಸ್ಥಿತರಿದ್ದರು. ಪಿಡಿಒ ಸರಿತಾ ಓಲ್ಗ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…