Advertisement
ನಮ್ಮೂರ ಸುದ್ದಿ

ಎಣ್ಮೂರು ಗ್ರಾಪಂ ಸಿಬಂದಿ ವಿರುದ್ಧ ದೂರು

Share

ನಿಂತಿಕಲ್ಲು : ಅಧಿಕಾರ ದುರುಪಯೋಗ ಪಡಿಸಿಕೊಂಡು ಪಂಚಾಯತ್‍ನಲ್ಲಿ ಹಣ ಹಾಗೂ ಇನ್ನಿತರ ಯೋಜನೆಗಳಲ್ಲಿ ಭ್ರಷ್ಟಾಚಾರ ನಡೆಸಲಾಗಿದೆ ಎಂದು ಆರೋಪಿಸಿ ಎಣ್ಮೂರು ಗ್ರಾ.ಪಂ ಸಿಬ್ಬಂದಿಯೋರ್ವರ ವಿರುದ್ಧ ಸುಳ್ಯ ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಮತ್ತು ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಆಡಳಿತ ಮಂಡಳಿ ದೂರು ನೀಡಲು ತೀರ್ಮಾನಿಸಿದೆ.

ಎಣ್ಮೂರು ಗ್ರಾ.ಪಂನಲ್ಲಿ ಹಲವು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೋರ್ವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಪಂಚಾಯತ್‍ಗೆ ಜನರಿಂದ ಸಂಗ್ರಹವಾದ ತೆರಿಗೆ ಹಾಗೂ ಇತರ ಮೂಲಗಳಿಂದ ಸಂಗ್ರಹವಾದ ಹಣವನ್ನು ಸ್ವಂತ ಉಪಯೋಗಕ್ಕೆ ಬಳಸಿಕೊಂಡಿದ್ದಾರೆ ಎನ್ನಲಾಗುತ್ತಿದ್ದು ಈ ವಿಷಯವನ್ನು ಆಡಳಿತ ಮಂಡಳಿ ಗಂಭೀರವಾಗಿ ಪರಿಗಣಿಸಿ ಅವ್ಯವಹಾರ ಮಾಡಿದ ಮೊತ್ತವನ್ನು ಬ್ಯಾಂಕ್ ಖಾತೆಗೆ ಜಮೆ ಭರಿಸಿಲಾಗಿತ್ತೆಂದು ತಿಳಿದುಬಂದಿದೆ.

ಅದಾದ ಬಳಿಕ ಕಳೆದ ವಾರದಲ್ಲಿ ಮತ್ತೆ ಇಂತಹುದೇ ಪ್ರಕರಣ ಬೆಳಕಿಗೆ ಬಂದಿದ್ದು ಪಂಚಾಯತ್‍ನ ಬ್ಯಾಂಕ್ ಖಾತೆಯ ಚೆಕ್‍ಗೆ ತಾನೇ ಪಿಡಿಒ ಸಹಿ ಪೋರ್ಜರಿ ಮಾಡಿ ಅಧ್ಯಕ್ಷರ ಸಹಿ ಹಾಕಿಸಿ 40 ಸಾವಿರ ಹಣವನ್ನು ಡ್ರಾ ಮಾಡಿಕೊಳ್ಳಲು ಪ್ರಯತ್ನಿಸಿದ್ದು ಬ್ಯಾಂಕ್ ಸಿಬ್ಬಂದಿ ಅನುಮಾನ ಬಂದು ಸಹಿ ಪರಿಶೀಲಿಸಿದಾಗ ಪೋರ್ಜರಿ ಮಾಡಿರುವುದಾಗಿ ತಿಳಿದುಬಂದಿದೆ. ಈ ಪದೇ ಪದೇ ಇಂತಹ ಪ್ರಕರಣಗಳು ಸಿಬ್ಬಂದಿಯಿಂದ ನಡೆಯುತ್ತಿರುವುದಾಗಿ ಆರೋಪಿಸಿ ಸಿಬ್ಬಂದಿಯ ಕರ್ತವ್ಯ ಲೋಪದ ವಿರುದ್ಧ ತಾ.ಪಂ ಇ.ಓಗೆ ಹಾಗೂ ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ದೂರು ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಸಿಬ್ಬಂದಿಯನ್ನು ಸಂಪರ್ಕಿಸಿದಾಗ ತನ್ನ ಮೇಲಿನ ಆರೋಪವನ್ನು ಅವರು ನಿರಾಕರಿಸಿರುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

24 minutes ago

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…

27 minutes ago

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…

30 minutes ago

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

17 hours ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

17 hours ago

ಹೊಸರುಚಿ – ಎಳೆಯ ಹಲಸಿನ ಕಾಯಿ ಬಾಲ್ : ಕರಕರಾ, ರುಚಿಕರ ಮತ್ತು ಆರೋಗ್ಯಕರ ಸ್ನ್ಯಾಕ್

ಎಳೆಯ ಹಲಸಿನ ಕಾಯಿ ಬಳಸಿ ತಯಾರಿಸಿದ ಈ ಬಾಲ್ಸ್ ರುಚಿಕರ ಮತ್ತು ಆರೋಗ್ಯಕರ…

2 days ago