ನಮ್ಮೂರ ಸುದ್ದಿ

ಎಣ್ಮೂರು ಗ್ರಾಪಂ ಸಿಬಂದಿ ವಿರುದ್ಧ ದೂರು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಿಂತಿಕಲ್ಲು : ಅಧಿಕಾರ ದುರುಪಯೋಗ ಪಡಿಸಿಕೊಂಡು ಪಂಚಾಯತ್‍ನಲ್ಲಿ ಹಣ ಹಾಗೂ ಇನ್ನಿತರ ಯೋಜನೆಗಳಲ್ಲಿ ಭ್ರಷ್ಟಾಚಾರ ನಡೆಸಲಾಗಿದೆ ಎಂದು ಆರೋಪಿಸಿ ಎಣ್ಮೂರು ಗ್ರಾ.ಪಂ ಸಿಬ್ಬಂದಿಯೋರ್ವರ ವಿರುದ್ಧ ಸುಳ್ಯ ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಮತ್ತು ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಆಡಳಿತ ಮಂಡಳಿ ದೂರು ನೀಡಲು ತೀರ್ಮಾನಿಸಿದೆ.

Advertisement
Advertisement

ಎಣ್ಮೂರು ಗ್ರಾ.ಪಂನಲ್ಲಿ ಹಲವು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೋರ್ವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಪಂಚಾಯತ್‍ಗೆ ಜನರಿಂದ ಸಂಗ್ರಹವಾದ ತೆರಿಗೆ ಹಾಗೂ ಇತರ ಮೂಲಗಳಿಂದ ಸಂಗ್ರಹವಾದ ಹಣವನ್ನು ಸ್ವಂತ ಉಪಯೋಗಕ್ಕೆ ಬಳಸಿಕೊಂಡಿದ್ದಾರೆ ಎನ್ನಲಾಗುತ್ತಿದ್ದು ಈ ವಿಷಯವನ್ನು ಆಡಳಿತ ಮಂಡಳಿ ಗಂಭೀರವಾಗಿ ಪರಿಗಣಿಸಿ ಅವ್ಯವಹಾರ ಮಾಡಿದ ಮೊತ್ತವನ್ನು ಬ್ಯಾಂಕ್ ಖಾತೆಗೆ ಜಮೆ ಭರಿಸಿಲಾಗಿತ್ತೆಂದು ತಿಳಿದುಬಂದಿದೆ.

ಅದಾದ ಬಳಿಕ ಕಳೆದ ವಾರದಲ್ಲಿ ಮತ್ತೆ ಇಂತಹುದೇ ಪ್ರಕರಣ ಬೆಳಕಿಗೆ ಬಂದಿದ್ದು ಪಂಚಾಯತ್‍ನ ಬ್ಯಾಂಕ್ ಖಾತೆಯ ಚೆಕ್‍ಗೆ ತಾನೇ ಪಿಡಿಒ ಸಹಿ ಪೋರ್ಜರಿ ಮಾಡಿ ಅಧ್ಯಕ್ಷರ ಸಹಿ ಹಾಕಿಸಿ 40 ಸಾವಿರ ಹಣವನ್ನು ಡ್ರಾ ಮಾಡಿಕೊಳ್ಳಲು ಪ್ರಯತ್ನಿಸಿದ್ದು ಬ್ಯಾಂಕ್ ಸಿಬ್ಬಂದಿ ಅನುಮಾನ ಬಂದು ಸಹಿ ಪರಿಶೀಲಿಸಿದಾಗ ಪೋರ್ಜರಿ ಮಾಡಿರುವುದಾಗಿ ತಿಳಿದುಬಂದಿದೆ. ಈ ಪದೇ ಪದೇ ಇಂತಹ ಪ್ರಕರಣಗಳು ಸಿಬ್ಬಂದಿಯಿಂದ ನಡೆಯುತ್ತಿರುವುದಾಗಿ ಆರೋಪಿಸಿ ಸಿಬ್ಬಂದಿಯ ಕರ್ತವ್ಯ ಲೋಪದ ವಿರುದ್ಧ ತಾ.ಪಂ ಇ.ಓಗೆ ಹಾಗೂ ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ದೂರು ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಸಿಬ್ಬಂದಿಯನ್ನು ಸಂಪರ್ಕಿಸಿದಾಗ ತನ್ನ ಮೇಲಿನ ಆರೋಪವನ್ನು ಅವರು ನಿರಾಕರಿಸಿರುತ್ತಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….

ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490

12 hours ago

ಬದುಕು ಪುರಾಣ | ಶ್ರೀಮಂತಿಕೆ ‘ಪಾಸ್ ಬುಕ್ಕಿನಲ್ಲಿ’ ಇರುವುದಲ್ಲ!

ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು  ಹಣ ಕೊಟ್ಟರೂ…

13 hours ago

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…

21 hours ago

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…

21 hours ago

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…

22 hours ago

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…

22 hours ago