Advertisement
ನಮ್ಮೂರ ಸುದ್ದಿ

ಎಣ್ಮೂರು ಗ್ರಾಪಂ ಸಿಬಂದಿ ವಿರುದ್ಧ ದೂರು

Share

ನಿಂತಿಕಲ್ಲು : ಅಧಿಕಾರ ದುರುಪಯೋಗ ಪಡಿಸಿಕೊಂಡು ಪಂಚಾಯತ್‍ನಲ್ಲಿ ಹಣ ಹಾಗೂ ಇನ್ನಿತರ ಯೋಜನೆಗಳಲ್ಲಿ ಭ್ರಷ್ಟಾಚಾರ ನಡೆಸಲಾಗಿದೆ ಎಂದು ಆರೋಪಿಸಿ ಎಣ್ಮೂರು ಗ್ರಾ.ಪಂ ಸಿಬ್ಬಂದಿಯೋರ್ವರ ವಿರುದ್ಧ ಸುಳ್ಯ ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಮತ್ತು ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಆಡಳಿತ ಮಂಡಳಿ ದೂರು ನೀಡಲು ತೀರ್ಮಾನಿಸಿದೆ.

ಎಣ್ಮೂರು ಗ್ರಾ.ಪಂನಲ್ಲಿ ಹಲವು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೋರ್ವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಪಂಚಾಯತ್‍ಗೆ ಜನರಿಂದ ಸಂಗ್ರಹವಾದ ತೆರಿಗೆ ಹಾಗೂ ಇತರ ಮೂಲಗಳಿಂದ ಸಂಗ್ರಹವಾದ ಹಣವನ್ನು ಸ್ವಂತ ಉಪಯೋಗಕ್ಕೆ ಬಳಸಿಕೊಂಡಿದ್ದಾರೆ ಎನ್ನಲಾಗುತ್ತಿದ್ದು ಈ ವಿಷಯವನ್ನು ಆಡಳಿತ ಮಂಡಳಿ ಗಂಭೀರವಾಗಿ ಪರಿಗಣಿಸಿ ಅವ್ಯವಹಾರ ಮಾಡಿದ ಮೊತ್ತವನ್ನು ಬ್ಯಾಂಕ್ ಖಾತೆಗೆ ಜಮೆ ಭರಿಸಿಲಾಗಿತ್ತೆಂದು ತಿಳಿದುಬಂದಿದೆ.

ಅದಾದ ಬಳಿಕ ಕಳೆದ ವಾರದಲ್ಲಿ ಮತ್ತೆ ಇಂತಹುದೇ ಪ್ರಕರಣ ಬೆಳಕಿಗೆ ಬಂದಿದ್ದು ಪಂಚಾಯತ್‍ನ ಬ್ಯಾಂಕ್ ಖಾತೆಯ ಚೆಕ್‍ಗೆ ತಾನೇ ಪಿಡಿಒ ಸಹಿ ಪೋರ್ಜರಿ ಮಾಡಿ ಅಧ್ಯಕ್ಷರ ಸಹಿ ಹಾಕಿಸಿ 40 ಸಾವಿರ ಹಣವನ್ನು ಡ್ರಾ ಮಾಡಿಕೊಳ್ಳಲು ಪ್ರಯತ್ನಿಸಿದ್ದು ಬ್ಯಾಂಕ್ ಸಿಬ್ಬಂದಿ ಅನುಮಾನ ಬಂದು ಸಹಿ ಪರಿಶೀಲಿಸಿದಾಗ ಪೋರ್ಜರಿ ಮಾಡಿರುವುದಾಗಿ ತಿಳಿದುಬಂದಿದೆ. ಈ ಪದೇ ಪದೇ ಇಂತಹ ಪ್ರಕರಣಗಳು ಸಿಬ್ಬಂದಿಯಿಂದ ನಡೆಯುತ್ತಿರುವುದಾಗಿ ಆರೋಪಿಸಿ ಸಿಬ್ಬಂದಿಯ ಕರ್ತವ್ಯ ಲೋಪದ ವಿರುದ್ಧ ತಾ.ಪಂ ಇ.ಓಗೆ ಹಾಗೂ ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ದೂರು ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಸಿಬ್ಬಂದಿಯನ್ನು ಸಂಪರ್ಕಿಸಿದಾಗ ತನ್ನ ಮೇಲಿನ ಆರೋಪವನ್ನು ಅವರು ನಿರಾಕರಿಸಿರುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಡಗಿನಲ್ಲಿ ಚೇತರಿಕೆ ಕಂಡ ಮಳೆ- ಮೈಕೊರೆಯುವ ಚಳಿ, ಕಾವೇರಿ ನೀರಿನ ಮಟ್ಟ ಏರಿಕೆ

ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ…

13 minutes ago

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…

11 hours ago

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…

15 hours ago

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

24 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

1 day ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

2 days ago