ನಿಂತಿಕಲ್ಲು : ಅಧಿಕಾರ ದುರುಪಯೋಗ ಪಡಿಸಿಕೊಂಡು ಪಂಚಾಯತ್ನಲ್ಲಿ ಹಣ ಹಾಗೂ ಇನ್ನಿತರ ಯೋಜನೆಗಳಲ್ಲಿ ಭ್ರಷ್ಟಾಚಾರ ನಡೆಸಲಾಗಿದೆ ಎಂದು ಆರೋಪಿಸಿ ಎಣ್ಮೂರು ಗ್ರಾ.ಪಂ ಸಿಬ್ಬಂದಿಯೋರ್ವರ ವಿರುದ್ಧ ಸುಳ್ಯ ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಮತ್ತು ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಆಡಳಿತ ಮಂಡಳಿ ದೂರು ನೀಡಲು ತೀರ್ಮಾನಿಸಿದೆ.
ಎಣ್ಮೂರು ಗ್ರಾ.ಪಂನಲ್ಲಿ ಹಲವು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೋರ್ವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಪಂಚಾಯತ್ಗೆ ಜನರಿಂದ ಸಂಗ್ರಹವಾದ ತೆರಿಗೆ ಹಾಗೂ ಇತರ ಮೂಲಗಳಿಂದ ಸಂಗ್ರಹವಾದ ಹಣವನ್ನು ಸ್ವಂತ ಉಪಯೋಗಕ್ಕೆ ಬಳಸಿಕೊಂಡಿದ್ದಾರೆ ಎನ್ನಲಾಗುತ್ತಿದ್ದು ಈ ವಿಷಯವನ್ನು ಆಡಳಿತ ಮಂಡಳಿ ಗಂಭೀರವಾಗಿ ಪರಿಗಣಿಸಿ ಅವ್ಯವಹಾರ ಮಾಡಿದ ಮೊತ್ತವನ್ನು ಬ್ಯಾಂಕ್ ಖಾತೆಗೆ ಜಮೆ ಭರಿಸಿಲಾಗಿತ್ತೆಂದು ತಿಳಿದುಬಂದಿದೆ.
ಅದಾದ ಬಳಿಕ ಕಳೆದ ವಾರದಲ್ಲಿ ಮತ್ತೆ ಇಂತಹುದೇ ಪ್ರಕರಣ ಬೆಳಕಿಗೆ ಬಂದಿದ್ದು ಪಂಚಾಯತ್ನ ಬ್ಯಾಂಕ್ ಖಾತೆಯ ಚೆಕ್ಗೆ ತಾನೇ ಪಿಡಿಒ ಸಹಿ ಪೋರ್ಜರಿ ಮಾಡಿ ಅಧ್ಯಕ್ಷರ ಸಹಿ ಹಾಕಿಸಿ 40 ಸಾವಿರ ಹಣವನ್ನು ಡ್ರಾ ಮಾಡಿಕೊಳ್ಳಲು ಪ್ರಯತ್ನಿಸಿದ್ದು ಬ್ಯಾಂಕ್ ಸಿಬ್ಬಂದಿ ಅನುಮಾನ ಬಂದು ಸಹಿ ಪರಿಶೀಲಿಸಿದಾಗ ಪೋರ್ಜರಿ ಮಾಡಿರುವುದಾಗಿ ತಿಳಿದುಬಂದಿದೆ. ಈ ಪದೇ ಪದೇ ಇಂತಹ ಪ್ರಕರಣಗಳು ಸಿಬ್ಬಂದಿಯಿಂದ ನಡೆಯುತ್ತಿರುವುದಾಗಿ ಆರೋಪಿಸಿ ಸಿಬ್ಬಂದಿಯ ಕರ್ತವ್ಯ ಲೋಪದ ವಿರುದ್ಧ ತಾ.ಪಂ ಇ.ಓಗೆ ಹಾಗೂ ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ದೂರು ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಸಿಬ್ಬಂದಿಯನ್ನು ಸಂಪರ್ಕಿಸಿದಾಗ ತನ್ನ ಮೇಲಿನ ಆರೋಪವನ್ನು ಅವರು ನಿರಾಕರಿಸಿರುತ್ತಾರೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…