Advertisement
ನಮ್ಮೂರ ಸುದ್ದಿ

ಎಣ್ಮೂರು ಗ್ರಾಪಂ ಸಿಬಂದಿ ವಿರುದ್ಧ ದೂರು

Share

ನಿಂತಿಕಲ್ಲು : ಅಧಿಕಾರ ದುರುಪಯೋಗ ಪಡಿಸಿಕೊಂಡು ಪಂಚಾಯತ್‍ನಲ್ಲಿ ಹಣ ಹಾಗೂ ಇನ್ನಿತರ ಯೋಜನೆಗಳಲ್ಲಿ ಭ್ರಷ್ಟಾಚಾರ ನಡೆಸಲಾಗಿದೆ ಎಂದು ಆರೋಪಿಸಿ ಎಣ್ಮೂರು ಗ್ರಾ.ಪಂ ಸಿಬ್ಬಂದಿಯೋರ್ವರ ವಿರುದ್ಧ ಸುಳ್ಯ ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಮತ್ತು ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಆಡಳಿತ ಮಂಡಳಿ ದೂರು ನೀಡಲು ತೀರ್ಮಾನಿಸಿದೆ.

ಎಣ್ಮೂರು ಗ್ರಾ.ಪಂನಲ್ಲಿ ಹಲವು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೋರ್ವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಪಂಚಾಯತ್‍ಗೆ ಜನರಿಂದ ಸಂಗ್ರಹವಾದ ತೆರಿಗೆ ಹಾಗೂ ಇತರ ಮೂಲಗಳಿಂದ ಸಂಗ್ರಹವಾದ ಹಣವನ್ನು ಸ್ವಂತ ಉಪಯೋಗಕ್ಕೆ ಬಳಸಿಕೊಂಡಿದ್ದಾರೆ ಎನ್ನಲಾಗುತ್ತಿದ್ದು ಈ ವಿಷಯವನ್ನು ಆಡಳಿತ ಮಂಡಳಿ ಗಂಭೀರವಾಗಿ ಪರಿಗಣಿಸಿ ಅವ್ಯವಹಾರ ಮಾಡಿದ ಮೊತ್ತವನ್ನು ಬ್ಯಾಂಕ್ ಖಾತೆಗೆ ಜಮೆ ಭರಿಸಿಲಾಗಿತ್ತೆಂದು ತಿಳಿದುಬಂದಿದೆ.

ಅದಾದ ಬಳಿಕ ಕಳೆದ ವಾರದಲ್ಲಿ ಮತ್ತೆ ಇಂತಹುದೇ ಪ್ರಕರಣ ಬೆಳಕಿಗೆ ಬಂದಿದ್ದು ಪಂಚಾಯತ್‍ನ ಬ್ಯಾಂಕ್ ಖಾತೆಯ ಚೆಕ್‍ಗೆ ತಾನೇ ಪಿಡಿಒ ಸಹಿ ಪೋರ್ಜರಿ ಮಾಡಿ ಅಧ್ಯಕ್ಷರ ಸಹಿ ಹಾಕಿಸಿ 40 ಸಾವಿರ ಹಣವನ್ನು ಡ್ರಾ ಮಾಡಿಕೊಳ್ಳಲು ಪ್ರಯತ್ನಿಸಿದ್ದು ಬ್ಯಾಂಕ್ ಸಿಬ್ಬಂದಿ ಅನುಮಾನ ಬಂದು ಸಹಿ ಪರಿಶೀಲಿಸಿದಾಗ ಪೋರ್ಜರಿ ಮಾಡಿರುವುದಾಗಿ ತಿಳಿದುಬಂದಿದೆ. ಈ ಪದೇ ಪದೇ ಇಂತಹ ಪ್ರಕರಣಗಳು ಸಿಬ್ಬಂದಿಯಿಂದ ನಡೆಯುತ್ತಿರುವುದಾಗಿ ಆರೋಪಿಸಿ ಸಿಬ್ಬಂದಿಯ ಕರ್ತವ್ಯ ಲೋಪದ ವಿರುದ್ಧ ತಾ.ಪಂ ಇ.ಓಗೆ ಹಾಗೂ ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ದೂರು ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಸಿಬ್ಬಂದಿಯನ್ನು ಸಂಪರ್ಕಿಸಿದಾಗ ತನ್ನ ಮೇಲಿನ ಆರೋಪವನ್ನು ಅವರು ನಿರಾಕರಿಸಿರುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

6 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

13 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

20 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

21 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

22 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

1 day ago