ನಿಂತಿಕಲ್ಲು : ಅಧಿಕಾರ ದುರುಪಯೋಗ ಪಡಿಸಿಕೊಂಡು ಪಂಚಾಯತ್ನಲ್ಲಿ ಹಣ ಹಾಗೂ ಇನ್ನಿತರ ಯೋಜನೆಗಳಲ್ಲಿ ಭ್ರಷ್ಟಾಚಾರ ನಡೆಸಲಾಗಿದೆ ಎಂದು ಆರೋಪಿಸಿ ಎಣ್ಮೂರು ಗ್ರಾ.ಪಂ ಸಿಬ್ಬಂದಿಯೋರ್ವರ ವಿರುದ್ಧ ಸುಳ್ಯ ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಮತ್ತು ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಆಡಳಿತ ಮಂಡಳಿ ದೂರು ನೀಡಲು ತೀರ್ಮಾನಿಸಿದೆ.
ಎಣ್ಮೂರು ಗ್ರಾ.ಪಂನಲ್ಲಿ ಹಲವು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೋರ್ವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಪಂಚಾಯತ್ಗೆ ಜನರಿಂದ ಸಂಗ್ರಹವಾದ ತೆರಿಗೆ ಹಾಗೂ ಇತರ ಮೂಲಗಳಿಂದ ಸಂಗ್ರಹವಾದ ಹಣವನ್ನು ಸ್ವಂತ ಉಪಯೋಗಕ್ಕೆ ಬಳಸಿಕೊಂಡಿದ್ದಾರೆ ಎನ್ನಲಾಗುತ್ತಿದ್ದು ಈ ವಿಷಯವನ್ನು ಆಡಳಿತ ಮಂಡಳಿ ಗಂಭೀರವಾಗಿ ಪರಿಗಣಿಸಿ ಅವ್ಯವಹಾರ ಮಾಡಿದ ಮೊತ್ತವನ್ನು ಬ್ಯಾಂಕ್ ಖಾತೆಗೆ ಜಮೆ ಭರಿಸಿಲಾಗಿತ್ತೆಂದು ತಿಳಿದುಬಂದಿದೆ.
ಅದಾದ ಬಳಿಕ ಕಳೆದ ವಾರದಲ್ಲಿ ಮತ್ತೆ ಇಂತಹುದೇ ಪ್ರಕರಣ ಬೆಳಕಿಗೆ ಬಂದಿದ್ದು ಪಂಚಾಯತ್ನ ಬ್ಯಾಂಕ್ ಖಾತೆಯ ಚೆಕ್ಗೆ ತಾನೇ ಪಿಡಿಒ ಸಹಿ ಪೋರ್ಜರಿ ಮಾಡಿ ಅಧ್ಯಕ್ಷರ ಸಹಿ ಹಾಕಿಸಿ 40 ಸಾವಿರ ಹಣವನ್ನು ಡ್ರಾ ಮಾಡಿಕೊಳ್ಳಲು ಪ್ರಯತ್ನಿಸಿದ್ದು ಬ್ಯಾಂಕ್ ಸಿಬ್ಬಂದಿ ಅನುಮಾನ ಬಂದು ಸಹಿ ಪರಿಶೀಲಿಸಿದಾಗ ಪೋರ್ಜರಿ ಮಾಡಿರುವುದಾಗಿ ತಿಳಿದುಬಂದಿದೆ. ಈ ಪದೇ ಪದೇ ಇಂತಹ ಪ್ರಕರಣಗಳು ಸಿಬ್ಬಂದಿಯಿಂದ ನಡೆಯುತ್ತಿರುವುದಾಗಿ ಆರೋಪಿಸಿ ಸಿಬ್ಬಂದಿಯ ಕರ್ತವ್ಯ ಲೋಪದ ವಿರುದ್ಧ ತಾ.ಪಂ ಇ.ಓಗೆ ಹಾಗೂ ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ದೂರು ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಸಿಬ್ಬಂದಿಯನ್ನು ಸಂಪರ್ಕಿಸಿದಾಗ ತನ್ನ ಮೇಲಿನ ಆರೋಪವನ್ನು ಅವರು ನಿರಾಕರಿಸಿರುತ್ತಾರೆ.
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…