ನಿಂತಿಕಲ್ಲು: ಸುಳ್ಯ ತಾಲೂಕಿನಿಂದ ಬೇರ್ಪಟ್ಟು ನೂತನ ಕಡಬ ತಾಲೂಕಿಗೆ ಸೇರ್ಪಡೆಗೊಂಡ ಎಣ್ಮೂರು ಗ್ರಾಮವನ್ನು ಗ್ರಾಮ ಪಂಚಾಯತ್ ಆಗಿ ಕಡಬ ತಾಲೂಕಿನೊಳಗೆ ಉಳಿಸಬೇಕೆಂದು ಎಣ್ಮೂರು ನಾಗರೀಕರು ಕಡಬ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸುಳ್ಯ ತಾಲೂಕಿನ ಮುರುಳ್ಯ ಹಾಗು ಎಣ್ಮೂರು ಈ ಎರಡು ಗ್ರಾಮಗಳು ಎಣ್ಮೂರು ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟಿತ್ತು. ಇತ್ತೀಚೆಗೆ ನೂತನವಾಗಿ ರಚನೆಯಾದ ಕಡಬ ತಾಲೂಕಿಗೆ ಎಣ್ಮೂರು ಸೇರ್ಪಡೆಯಾಗಿದೆ. ಮುರುಳ್ಯ ಗ್ರಾಮವು ಸುಳ್ಯ ತಾಲೂಕಿನಲ್ಲಿಯೇ ಉಳಿದುಕೊಂಡಿದ್ದು, ಇವುಗಳೆರಡಕ್ಕೂ ಐತಿಹಾಸಿಕ ಹಿನ್ನೆಲೆಯಿದೆ. ಈಗಾಗಲೇ ಎಲ್ಲಾ ಬಗೆಯ ಮೂಲ ಸೌಕರ್ಯಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಎಣ್ಮೂರು ಗ್ರಾಮ ಪಂಚಾಯತ್ ಎಣ್ಮೂರಿನಲ್ಲಿಯೇ ಕಾರ್ಯಾಚರಿಸುತ್ತಿದ್ದು ಎಲ್ಲಾ ವ್ಯವಸ್ಥೆ ಹೊಂದಿದೆ. ಹೀಗಾಗಿ ಎಣ್ಮೂರು ಗ್ರಾಮ ಪಂಚಾಯತ್ ಆಗಿಯೇ ಕಡಬ ತಾಲೂಕಿನಲ್ಲಿ ಉಳಿಸಬೇಕೆಂದು ರಮೇಶ್ ಕೋಟೆಯವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ಎನ್.ಜಿ ಪ್ರಭಾಕರ ರೈ, ಎನ್.ಜಿ ಲೋಕನಾಥ ರೈ, ಎಣ್ಮೂರು ಗ್ರಾಮ ಪಂಚಾಯತ್ ಸದಸ್ಯ ರಘುಪ್ರಸಾದ್ ರೈ, ಸಾದಿಕ್ ನರ್ಲಡ್ಕ, ಜನಾರ್ಧನ ,ಮಾಯಿಲಪ್ಪ ಗೌಡ, ಮಹಮ್ಮದ್ ಎಣ್ಮೂರು ಉಪಸ್ಥಿತರಿದ್ದರು.
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…