ನಿಂತಿಕಲ್ಲು: ಸುಳ್ಯ ತಾಲೂಕಿನಿಂದ ಬೇರ್ಪಟ್ಟು ನೂತನ ಕಡಬ ತಾಲೂಕಿಗೆ ಸೇರ್ಪಡೆಗೊಂಡ ಎಣ್ಮೂರು ಗ್ರಾಮವನ್ನು ಗ್ರಾಮ ಪಂಚಾಯತ್ ಆಗಿ ಕಡಬ ತಾಲೂಕಿನೊಳಗೆ ಉಳಿಸಬೇಕೆಂದು ಎಣ್ಮೂರು ನಾಗರೀಕರು ಕಡಬ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸುಳ್ಯ ತಾಲೂಕಿನ ಮುರುಳ್ಯ ಹಾಗು ಎಣ್ಮೂರು ಈ ಎರಡು ಗ್ರಾಮಗಳು ಎಣ್ಮೂರು ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟಿತ್ತು. ಇತ್ತೀಚೆಗೆ ನೂತನವಾಗಿ ರಚನೆಯಾದ ಕಡಬ ತಾಲೂಕಿಗೆ ಎಣ್ಮೂರು ಸೇರ್ಪಡೆಯಾಗಿದೆ. ಮುರುಳ್ಯ ಗ್ರಾಮವು ಸುಳ್ಯ ತಾಲೂಕಿನಲ್ಲಿಯೇ ಉಳಿದುಕೊಂಡಿದ್ದು, ಇವುಗಳೆರಡಕ್ಕೂ ಐತಿಹಾಸಿಕ ಹಿನ್ನೆಲೆಯಿದೆ. ಈಗಾಗಲೇ ಎಲ್ಲಾ ಬಗೆಯ ಮೂಲ ಸೌಕರ್ಯಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಎಣ್ಮೂರು ಗ್ರಾಮ ಪಂಚಾಯತ್ ಎಣ್ಮೂರಿನಲ್ಲಿಯೇ ಕಾರ್ಯಾಚರಿಸುತ್ತಿದ್ದು ಎಲ್ಲಾ ವ್ಯವಸ್ಥೆ ಹೊಂದಿದೆ. ಹೀಗಾಗಿ ಎಣ್ಮೂರು ಗ್ರಾಮ ಪಂಚಾಯತ್ ಆಗಿಯೇ ಕಡಬ ತಾಲೂಕಿನಲ್ಲಿ ಉಳಿಸಬೇಕೆಂದು ರಮೇಶ್ ಕೋಟೆಯವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ಎನ್.ಜಿ ಪ್ರಭಾಕರ ರೈ, ಎನ್.ಜಿ ಲೋಕನಾಥ ರೈ, ಎಣ್ಮೂರು ಗ್ರಾಮ ಪಂಚಾಯತ್ ಸದಸ್ಯ ರಘುಪ್ರಸಾದ್ ರೈ, ಸಾದಿಕ್ ನರ್ಲಡ್ಕ, ಜನಾರ್ಧನ ,ಮಾಯಿಲಪ್ಪ ಗೌಡ, ಮಹಮ್ಮದ್ ಎಣ್ಮೂರು ಉಪಸ್ಥಿತರಿದ್ದರು.
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…