ಸುದ್ದಿಗಳು

ಎಣ್ಮೂರು ಗ್ರಾಮ ಪಂಚಾಯತ್ ಆಗಿ ಕಡಬದಲ್ಲಿಯೇ ಇರಲಿ – ಮನವಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಿಂತಿಕಲ್ಲು: ಸುಳ್ಯ ತಾಲೂಕಿನಿಂದ ಬೇರ್ಪಟ್ಟು ನೂತನ ಕಡಬ ತಾಲೂಕಿಗೆ ಸೇರ್ಪಡೆಗೊಂಡ ಎಣ್ಮೂರು ಗ್ರಾಮವನ್ನು  ಗ್ರಾಮ ಪಂಚಾಯತ್ ಆಗಿ ಕಡಬ  ತಾಲೂಕಿನೊಳಗೆ ಉಳಿಸಬೇಕೆಂದು ಎಣ್ಮೂರು ನಾಗರೀಕರು ಕಡಬ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸುಳ್ಯ ತಾಲೂಕಿನ ಮುರುಳ್ಯ ಹಾಗು ಎಣ್ಮೂರು ಈ ಎರಡು ಗ್ರಾಮಗಳು ಎಣ್ಮೂರು ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟಿತ್ತು. ಇತ್ತೀಚೆಗೆ ನೂತನವಾಗಿ ರಚನೆಯಾದ ಕಡಬ ತಾಲೂಕಿಗೆ ಎಣ್ಮೂರು ಸೇರ್ಪಡೆಯಾಗಿದೆ. ಮುರುಳ್ಯ ಗ್ರಾಮವು ಸುಳ್ಯ ತಾಲೂಕಿನಲ್ಲಿಯೇ ಉಳಿದುಕೊಂಡಿದ್ದು, ಇವುಗಳೆರಡಕ್ಕೂ ಐತಿಹಾಸಿಕ ಹಿನ್ನೆಲೆಯಿದೆ. ಈಗಾಗಲೇ ಎಲ್ಲಾ ಬಗೆಯ ಮೂಲ ಸೌಕರ್ಯಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಎಣ್ಮೂರು ಗ್ರಾಮ ಪಂಚಾಯತ್  ಎಣ್ಮೂರಿನಲ್ಲಿಯೇ ಕಾರ್ಯಾಚರಿಸುತ್ತಿದ್ದು ಎಲ್ಲಾ ವ್ಯವಸ್ಥೆ ಹೊಂದಿದೆ. ಹೀಗಾಗಿ ಎಣ್ಮೂರು ಗ್ರಾಮ ಪಂಚಾಯತ್  ಆಗಿಯೇ ಕಡಬ ತಾಲೂಕಿನಲ್ಲಿ  ಉಳಿಸಬೇಕೆಂದು ರಮೇಶ್ ಕೋಟೆಯವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

Advertisement

ಈ ಸಂದರ್ಭ ಎನ್.ಜಿ ಪ್ರಭಾಕರ ರೈ, ಎನ್.ಜಿ ಲೋಕನಾಥ ರೈ, ಎಣ್ಮೂರು ಗ್ರಾಮ ಪಂಚಾಯತ್ ಸದಸ್ಯ ರಘುಪ್ರಸಾದ್ ರೈ, ಸಾದಿಕ್ ನರ್ಲಡ್ಕ, ಜನಾರ್ಧನ ,ಮಾಯಿಲಪ್ಪ ಗೌಡ, ಮಹಮ್ಮದ್ ಎಣ್ಮೂರು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ

ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…

4 hours ago

ಹವಾಮಾನ ವರದಿ | 11-08-2025 | ಇಂದು ಸಾಮಾನ್ಯ ಮಳೆ | ಆ-12 ರಿಂದ ಆ-20 ರವರಗೆ ರಾಜ್ಯದ ವಿವಿದೆಡೆ ಮಳೆ |

ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…

11 hours ago

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

16 hours ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

17 hours ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

2 days ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago