ನಿಂತಿಕಲ್ಲು: ಸುಳ್ಯ ತಾಲೂಕಿನಿಂದ ಬೇರ್ಪಟ್ಟು ನೂತನ ಕಡಬ ತಾಲೂಕಿಗೆ ಸೇರ್ಪಡೆಗೊಂಡ ಎಣ್ಮೂರು ಗ್ರಾಮವನ್ನು ಗ್ರಾಮ ಪಂಚಾಯತ್ ಆಗಿ ಕಡಬ ತಾಲೂಕಿನೊಳಗೆ ಉಳಿಸಬೇಕೆಂದು ಎಣ್ಮೂರು ನಾಗರೀಕರು ಕಡಬ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸುಳ್ಯ ತಾಲೂಕಿನ ಮುರುಳ್ಯ ಹಾಗು ಎಣ್ಮೂರು ಈ ಎರಡು ಗ್ರಾಮಗಳು ಎಣ್ಮೂರು ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟಿತ್ತು. ಇತ್ತೀಚೆಗೆ ನೂತನವಾಗಿ ರಚನೆಯಾದ ಕಡಬ ತಾಲೂಕಿಗೆ ಎಣ್ಮೂರು ಸೇರ್ಪಡೆಯಾಗಿದೆ. ಮುರುಳ್ಯ ಗ್ರಾಮವು ಸುಳ್ಯ ತಾಲೂಕಿನಲ್ಲಿಯೇ ಉಳಿದುಕೊಂಡಿದ್ದು, ಇವುಗಳೆರಡಕ್ಕೂ ಐತಿಹಾಸಿಕ ಹಿನ್ನೆಲೆಯಿದೆ. ಈಗಾಗಲೇ ಎಲ್ಲಾ ಬಗೆಯ ಮೂಲ ಸೌಕರ್ಯಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಎಣ್ಮೂರು ಗ್ರಾಮ ಪಂಚಾಯತ್ ಎಣ್ಮೂರಿನಲ್ಲಿಯೇ ಕಾರ್ಯಾಚರಿಸುತ್ತಿದ್ದು ಎಲ್ಲಾ ವ್ಯವಸ್ಥೆ ಹೊಂದಿದೆ. ಹೀಗಾಗಿ ಎಣ್ಮೂರು ಗ್ರಾಮ ಪಂಚಾಯತ್ ಆಗಿಯೇ ಕಡಬ ತಾಲೂಕಿನಲ್ಲಿ ಉಳಿಸಬೇಕೆಂದು ರಮೇಶ್ ಕೋಟೆಯವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ಎನ್.ಜಿ ಪ್ರಭಾಕರ ರೈ, ಎನ್.ಜಿ ಲೋಕನಾಥ ರೈ, ಎಣ್ಮೂರು ಗ್ರಾಮ ಪಂಚಾಯತ್ ಸದಸ್ಯ ರಘುಪ್ರಸಾದ್ ರೈ, ಸಾದಿಕ್ ನರ್ಲಡ್ಕ, ಜನಾರ್ಧನ ,ಮಾಯಿಲಪ್ಪ ಗೌಡ, ಮಹಮ್ಮದ್ ಎಣ್ಮೂರು ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…